ಅಕ್ಷರ ದಾಸೋಹ ಎಫ್.ಡಿ.ಎ ಆಯೇಷಾ ಸಿದ್ದಿಖಾ ಅಮಾನತು
ಚಿತ್ರದುರ್ಗ: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಯಮ(ಕೆ.ಟಿ.ಪಿ.ಪಿ)ಉಲ್ಲಂಘಿಸಿ, ನಿಯಮ ಬಾಹಿರವಾಗಿ ಟೆಂಡರ್ ಲಕೋಟೆ ತರೆದು, ಆರ್ಥಿಕ ಬಿಡ್ ದರ ತಿದ್ದುಪಡಿ ಮಾಡಿದ ಆರೋಪದ ಮೇಲೆ ಜಿಲ್ಲಾ ಪಂಚಾಯಿತಿ ಅಕ್ಷರ ದಾಸೋಹ ವಿಭಾಗದ ಪ್ರಥಮ ದರ್ಜೆ ಸಹಾಯಕಿ (ಎಫ್.ಡಿ.ಎ) ಆಯೇಷಾ ಸಿದ್ದಿಖಾ ಅವರನ್ನು ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
2024-25ನೇ ಸಾಲಿನ ಅಕ್ಷರ ದಾಸೋಹ ಕಾರ್ಯಕ್ರಮ ಅನುಷ್ಠಾನ ಸಂಬಂಧವಾಗಿ ಇಲಾಖೆ ಉಪಯೋಗಕ್ಕೆ ಬಾಡಿಗೆ ಆಧಾರದ ಮೇಲೆ ಹೊರಮೂಲ ಸಂಸ್ಥೆಯಿಂದ ವಾಹನ ಸೇವೆ ಪಡೆಯಲು ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ಪ್ರಕ್ರಿಯೆಯಲ್ಲಿ, ಕೆ.ಟಿ.ಪಿ.ಪಿ ನಿಯಮ ಉಲಂಘಿಸಿ ಎಫ್.ಡಿ.ಎ ಆಯೇಷಾ ಸಿದ್ದಿಖಾ ಟೆಂಡರ್ ಲಕೋಟೆಗಳನ್ನು ತರೆದಿರುತ್ತಾರೆ. ಆರ್ಥಿಕ ಬಿಡ್ ದರ ತಿದ್ದುಪಡಿ ಮಾಡಿ, ನಂತರ ತಿದ್ದುಪಡಿ ಮಾಡಿರುವ ಪ್ರತಿಗಳನ್ನು ಸಹ ಕಡತದಿಂದ ತೆಗೆದು ಹಾಕಿರುತ್ತಾರೆ. ಈ ಕುರಿತು ಪರಿಶೀಲಿಸಿ ಜಿ.ಪಂ.ಮುಖ್ಯ ಲೆಕ್ಕಾಧಿಕಾರಿಗಳು ವರದಿ ನೀಡಿದ್ದರು. ಇದನ್ನು ಆಧರಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಕೆ.ಸಿ.ಎಸ್. ನಿಯಮಾವಳಿ ಅನ್ವಯ ವಿಚಾರಣೆಗೆ ಕಾಯ್ದಿರಿಸಿ, ಆಯೇಷಾ ಸಿದ್ದಿಖಾ ಅವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.