LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಣ್ಣನನ್ನು ಕೊಂದವರ ಜೈಲಿಗಟ್ಟಲು ಕಷ್ಟಪಟ್ಟು ಓದಿ ವಕೀಲನಾಗಿ ಕೇಸ್ ಗೆದ್ದ ಸಹೋದರ

ಮುಂಬೈ : ತನ್ನ ಅಣ್ಣನನ್ನು ಕೊಂದವರನ್ನು ಜೈಲಿಗಟ್ಟಲು, ನ್ಯಾಯದ ಪರವಾಗಿ ಹೋರಾಟ ಮಾಡಲು ತನ್ನ ಜೀವನವನ್ನೇ ಮುಡುಪಾಗಿಟ್ಟ ಯುಕನೊಬ್ಬನ ಕಥೆ ವೈರಲ್ ಆಗಿದೆ.

ಜೊತೆಗೆ ಅಣ್ಣನ ಕೊಂದವರ ಜೈಲಿಗಟ್ಟಲು ವಕೀಲನಾಗಿ, ಕೇಸ್ ಕೂಡ ಆ ಸಹೋದರ ಗೆದ್ದಿದ್ದಾನೆ. 2011ರಲ್ಲಿ ಮುಂಬೈನ ಅಂಧೇರಿಯ ಅಂಬೋಲಿ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಕೀನನ್ ಮತ್ತು ರುಬೆನ್ ಎಂಬ ಯುವಕರು ಪಾರ್ಟಿ ಮಾಡಿ, ಮನೆಗೆ ತೆರಳುವಾಗ ಕೆಲವು ಮಂದಿ ಕಿಚಾಯಿಸಿದ್ದರು. ಇದು ವಿಕೋಪಕ್ಕೆ ತಿರುಗಿ ಕೈಕೈ ಮಿಲಾಯಿಸಿದ್ದರು. ಈ ವೇಳೆ ಹಲ್ಲೆ ನಡೆದು ಕೀನನ್ ಮತ್ತು ರುಬೆನ್ ಮೃತಪಟ್ಟಿದ್ದರು. ಈ ಸಂದರ್ಭದಲ್ಲಿ ಕೀನನ್ ಸಹೋದರ ಶೇನ್ ಸ್ಯಾಂಟೋಸ್‌ಗೆ ಕೇವಲ 19 ವರ್ಷದವನಾಗಿದ್ದ. ಹೀಗೆ ಅಣ್ಣ ಕೀನನ್ ಹಾಗೂ ಆತನ ಸ್ನೇಹಿತ ರುಬೆನ್ ಕೊಂದವನ್ನು ಜೈಲಿಗಟ್ಟುವ ಛಲವನ್ನು ಅಂದು ಕೀನನ್ ಸಹೋದರ ಶೇನ್ ತೊಟ್ಟನು.

https://bcsuddi.com/%e0%b2%8e%e0%b2%b8%e0%b3%8d%e0%b2%8e%e0%b2%b8%e0%b3%8d%e0%b2%8e%e0%b2%b2%e0%b3%8d%e0%b2%b5%e0%b2%bf-%e0%b2%96%e0%b2%be%e0%b2%b8%e0%b2%97%e0%b2%bf-%e0%b2%b5%e0%b2%b2%e0%b2%af/

ಕೊಲೆಗೆಡುಕರಿಗೆ ತಕ್ಕ ಶಾಸ್ತಿ ಮಾಡಲೇಬೇಕೆಂದು ನಿರ್ಧರಿಸಿದ ಶೇನ್ ಸ್ಯಾಂಟೋಸ್ ಕಷ್ಟಪಟ್ಟು ಓದಿ 2020ರಲ್ಲಿ ಕಾನೂನು ಪದವಿ ಪಡೆದಿದ್ದ. ಆ ಬಳಿಕ ಕೋರ್ಟ್ ಗೆ ಸಹೋದರ ಮತ್ತು ಗೆಳೆಯನ ಕೊಲೆ ಪ್ರಕರಣದ ವಿಚಾರಣೆಗೆ ತಾನೇ ಪ್ರಬಲ ವಾದ ಕೂಡ ಮಂಡಿಸಿದರು. ಈ ಪರಿಣಾಮವಾಗಿ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಜಿತೇಂದ್ರ ರಾಣಾ ಮತ್ತು ಆತನ ಮೂವರು ಗೆಳೆಯರಿಗೆ ಮುಂಬೈ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಮೂಲಕ ಶೇನ್ ಸ್ಯಾಂಟೋಸ್ ನ್ಯಾಯದ ಪರ ಹೋರಾಡಿ ಗೆಲುವು ಸಾಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಬೈ ದಾಳಿಯ ಮಾಸ್ಟರ್‌ ಮೈಂಡ್‌ ಹಫೀಜ್‌ನನ್ನ ಭಾರತಕ್ಕೆ ಹಸ್ತಾಂತರಿಸಲು ನಿರಾಕರಿಸಿದ ಪಾಕ್ರಾಮಮಂದಿರ ಉದ್ಘಾಟನೆ ದಿನ ದೇಶದ ಪ್ರತಿಯೊಬ್ಬರು ಮನೆಯಲ್ಲಿ ಜ್ಯೋತಿ ಬೆಳಗಿಸಿ- ಮೋದಿ ಕರೆನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿ