LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತ್ಯಂತ ಸುಧಾರಿತ ಸ್ನೈಪರ್​ ರೈಫಲ್ ರಫ್ತುದಾರ ದೇಶವೆಂಬ ಖ್ಯಾತಿ ಪಡೆದ ಭಾರತ

ನವದೆಹಲಿ : ಭಾರತವೀಗ ಅತ್ಯಂತ ಸುಧಾರಿತ ಸ್ನೈಪರ್​ ರೈಫಲ್ ರಫ್ತುದಾರ ದೇಶವೆಂಬ ಖ್ಯಾತಿಯನ್ನು ಗಿಟ್ಟಿಸಿಕೊಂಡಿದೆ. ಬೆಂಗಳೂರು ಮೂಲದ ಸಣ್ಣ ಶಸ್ತ್ರಾಸ್ತ್ರ ತಯಾರಕ ಕಂಪನಿಯಾಗಿರುವ ಎಸ್‌ಎಸ್‌ಎಸ್ ಡಿಫೆನ್ಸ್ 338 ಲಪುವಾ ಮ್ಯಾಗ್ನಮ್ ಕ್ಯಾಲಿಬರ್ ಸ್ನೈಪರ್ ರೈಫಲ್ ಪೂರೈಕೆಗಾಗಿ ಸ್ನೇಹಪರ ದೇಶಗಳ ಜತೆ ಮೆಗಾ ರಫ್ತು ಒಪ್ಪಂದ ಮಾಡಿಕೊಂಡಿದೆ. ಇದೇ ಮೊದಲ ಬಾರಿಗೆ ಭಾರತವು ಸ್ನೈಪರ್ ರೈಫಲ್ಸ್​ಗಳನ್ನು ವಿದೇಶಕ್ಕೆ ರಫ್ತು ಮಾಡಿದೆ ಎಂದು ರಕ್ಷಣಾ ಸಂಸ್ಥೆಯ ಮೂಲಗಳು ತಿಳಿಸಿವೆ. ಸ್ನೈಪರ್ ರೈಫಲ್ ಅನ್ನು ಅದರ ಬ್ಯಾರೆಲ್ ಸೇರಿದಂತೆ ಸಂಪೂರ್ಣವಾಗಿ ವಿನ್ಯಾಸಗೊಳಿಸಲಾಗಿದ್ದು, ಭಾರತದಲ್ಲಿ ತಯಾರಿಸಲಾಗಿದೆ. ಸ್ನೈಪರ್ ರೈಫಲ್ ಅನ್ನು 1,500 ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನ ಮೀಟರ್​ ಗುರಿಗಳನ್ನು ಹೊಡೆಯುವುದಕ್ಕೆ ಪೂರಕವಾಗಿ ವಿನ್ಯಾಸಗೊಳಿಸಲಾಗಿದೆ. ಮಿಗಿಲಾಗಿ ಈ ಖಾಸಗಿ ಸಂಸ್ಥೆಯು ರೈಫಲ್​​ಗಳ ಜತೆಗೆ ಅನೇಕ ದೇಶಗಳಿಂದ ಸುಮಾರು 50 ಮಿಲಿಯನ್ ಡಾಲರ್ ಮೌಲ್ಯದ ಮದ್ದು ಗುಂಡುಗಳನ್ನು ಪೂರೈಸುವ ಗುತ್ತಿಗೆಗಳನ್ನು ಕೂಡ ಪಡೆದುಕೊಂಡಿದೆ. ಖಾಸಗಿ ಕಂಪನಿಗಳು ತಮ್ಮ ಗ್ರಾಹಕರಿಗಾಗಿ ಹುಡುಕುತ್ತಿದ್ದರೆ, ಭಾರತ ಸರ್ಕಾರವು ಕ್ಷಿಪ್ರವಾಗಿ ಅನುಮತಿಗಳ ಮೂಲಕ ವಹಿವಾಟುಗಳನ್ನು ಗಟ್ಟಿಗೊಳಿಸುತ್ತಿದೆ. ಅಲ್ಲದೆ ವಿದೇಶಗಳಿಂದ ಬರುವ ಬೇಡಿಕೆಗಳನ್ನು ಈ ಕಂಪನಿಗಳಿಗೆ ರವಾನಿಸುತ್ತಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಭಾರತದ ವಾರ್ಷಿಕ ರಕ್ಷಣಾ ಉತ್ಪಾದನೆಯು 2023-24ರಲ್ಲಿ ದಾಖಲೆಯ ಗರಿಷ್ಠ 1.27 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಮೇಕ್ ಇನ್ ಇಂಡಿಯಾ ಯೋಜನೆಯು ಈ ಹೊಸ ಹೊಸ ಮೈಲಿಗಲ್ಲು ತಲುಪಲು ನೆರವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ