LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅದಾನಿ ಹಗರಣದಲ್ಲಿ ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್‌ ಭಾಗಿ - ಹಿಂಡೆನ್ ಬರ್ಗ್‌ನಿಂದ ಸ್ಫೋಟಕ ವರದಿ

ನವದೆಹಲಿ: ಭಾರತದ ಶ್ರೀಮಂತ ಗೌತಮ್ ಅದಾನಿ ಗ್ರೂಪ್‌ನ ಷೇರುಗಳಿಗೆ ಸಂಬಂಧಿಸಿದಂತೆ ಕಳೆದ ವರ್ಷ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡೆನ್‌ಬರ್ಗ್‌ ಬಹಿರಂಗಪಡಿಸಿದ್ದ ವರದಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಈ ಬೆನ್ನಲ್ಲೇ ಹಿಂಡನ್‌ಬರ್ಗ್‌ ಮತ್ತೊಂದು ಸ್ಫೋಟಕ ವರದಿ ಬಹಿರಂಗಪಡಿಸಿದೆ. ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ (SEBI) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡೆನ್‌ಬರ್ಗ್ ಆರೋಪಿಸಿದೆ. ಅಮೆರಿಕಾದ ಶಾರ್ಟ್ ಸೆಲ್ಲರ್ ಸಂಸ್ಥೆಯು ನಿನ್ನೆ (ಆಗಷ್ಟ್‌ 10ರ) ಪೋಸ್ಟ್‌ನಲ್ಲಿ, 'ಭಾರತದಲ್ಲಿ ಶೀಘ್ರದಲ್ಲೇ ದೊಡ್ಡದೊಂದು ಸಂಭವಿಸುತ್ತದೆ' ಎಂದು ಬರೆದುಕೊಂಡಿತ್ತು. ಇದು ದೇಶದಲ್ಲಿ ಭಾರೀ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಇದೀಗ ವರದಿ ಬಿಡುಗಡೆ ಮಾಡಿದ್ದು ಅದಾನಿ ಗ್ರೂಪ್ ಮತ್ತು ಸೆಬಿ ಮುಖ್ಯಸ್ಥರ ನಡುವೆ ಸಂಬಂಧವಿದೆ ಎಂದು ಹಿಂಡೆನ್‌ಬರ್ಗ್ ಈ ವರದಿಯಲ್ಲಿ ಹೇಳಿಕೊಂಡಿದೆ. ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಕಡಲಾಚೆಯ ಘಟಕಗಳಲ್ಲಿ ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಪಾಲು ಹೊಂದಿದ್ದಾರೆ ಎಂದು ವಿಸ್ಲ್‌ಬ್ಲೋವರ್‌ನಿಂದ ಪಡೆದ ದಾಖಲೆಗಳು ತೋರಿಸುತ್ತವೆ ಎಂದು ಹಿಂಡೆನ್‌ಬರ್ಗ್ ರಿಸರ್ಚ್ ದೂರಿದೆ. 1996ರಲ್ಲಿ ಮುಂಬೈನಲ್ಲಿ ಜನಿಸಿದ ಮಾಧಬಿ ಪುರಿ ಬುಚ್ ಅವರು, ಗಣಿತ, ಹಣಕಾಸಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದರು. ಹಾಗಾಗಿ ಅವರು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಅಹ್ಮದಾಬಾದ್‌ನಿಂದ ಎಂಬಿಎ ಪಡೆದಿದ್ದಾರೆ. 1989ರಲ್ಲಿ ಅವರು ಐಸಿಐಸಿಐ ಬ್ಯಾಂಕ್‌ ಸೇರುವ ಮೂಲಕ ಹಣಕಾಸು ಕ್ಷೇತ್ರದಲ್ಲಿ ವೃತ್ತಿ ಆರಂಭಿಸಿದರು. ಬಳಿಕ ಒಂದೊಂದೇ ಹುದ್ದೆಗಳನ್ನು ಏರುತ್ತ, 2009ರಲ್ಲಿ ಐಸಿಐಸಿಐ ಸೆಕ್ಯುರಿಟೀಸ್‌ನ ಎಂಡಿ ಹಾಗೂ ಸಿಇಒ ಆದರು. ಐಸಿಐಸಿಐ ತೊರೆದ ಅವರು ಶಾಂಘೈನಲ್ಲಿರುವ ನ್ಯೂ ಡೆವಲಪ್‌ಮೆಂಟ್‌ ಬ್ಯಾಂಕ್‌ನ ಕನ್ಸಲ್ಟಂಟ್ ಆಗಿ ನೇಮಕಗೊಂಡರು. ಇದಾದ ಬಳಿಕವೇ ಅವರಿಗೆ ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಸಂಪರ್ಕ ಬೆಳೆದವು ಎಂದು ಹೇಳಲಾಗುತ್ತಿದೆ. ನಂತರ ಭಾರತಕ್ಕೆ ಬಂದ ಅವರು 2022ರಲ್ಲಿ ಸೆಬಿ ಅಧ್ಯಕ್ಷೆಯಾಗಿಯೂ ನೇಮಕಗೊಂಡರು. ಆ ಮೂಲಕ ಮಾರುಕಟ್ಟೆ ನಿಯಂತ್ರಕ ಸಂಸ್ಥೆಗೆ ಮುಖ್ಯಸ್ಥೆಯಾದ ಮೊದಲ ಮಹಿಳೆ ಎನಿಸಿದರು. ಈಗ ಅವರ ವಿರುದ್ಧವೇ ಹಗರಣದ ಆರೋಪ ಕೇಳಿಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ