LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅದಾನಿ-ಹಿಂಡೆನ್‌ಬರ್ಗ್ ಕೇಸ್: ಸೆಬಿಯಿಂದ ಎಸ್‌ಐಟಿಗೆ ತನಿಖೆ ವರ್ಗಾಯಿಸಲು ಸಾಧ್ಯವಿಲ್ಲ - ಸುಪ್ರೀಂ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ಹಾಗೂ ಹಿಂಡೇನ್‌ಬರ್ಗ್‌ ಪ್ರಕರಣದಲ್ಲಿ ತನಿಖೆಯನ್ನು ಸೆಬಿಯಿಂದ ವಿಶೇಷ ತನಿಖಾ ತಂಡ (ಎಸ್ಐಟಿ) ಅಥವಾ ಕೇಂದ್ರೀ ಯ ತನಿಖಾ ದಳ (ಸಿಬಿಐ)ದ ಕ್ರಿಮಿನಲ್ ತನಿಖೆಗೆ ವರ್ಗಾಯಿಸುವುದಕ್ಕೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ಸೆಬಿಯೇ 3 ತಿಂಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಿದೆ. ಸೆಬಿ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಕ್ಕೆ ಸುಪ್ರೀಂಕೋರ್ಟ್‌ಗೆ ಸೀಮಿತ ಅಧಿಕಾರ ವ್ಯಾಪ್ತಿಯಿದೆ. ಹೀಗಿರುವಾಗ, ಅದಾನಿ ವಿರುದ್ಧದ ತನಿಖೆಯನ್ನು ಸೆಬಿಯಿಂದ ಎಸ್‌ಐಟಿಗೆ ವರ್ಗಾಯಿಸುವುದಕ್ಕೆ ಯಾವುದೇ ಆಧಾರವಿಲ್ಲ ಎಂದು ಹೇಳಿದೆ.

SEBI ತನ್ನ ತನಿಖೆಯನ್ನು ಕಾನೂನಿನ ಪ್ರಕಾರ ಮುಂದುವರಿಸುತ್ತದೆ ಎಂದು ಧೃಡಪಡಿಸಿದ ಸುಪ್ರೀಂ ಕೋರ್ಟ್ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ SEBI ಕೊರತೆಗಳಿವೆ ಎಂದು ಸೂಚಿಸಲು ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದೆ. ಅದಾನಿ ಗ್ರೂಪ್ ಮತ್ತು ಸೆಕ್ಯು ರಿಟೀಸ್ ಮತ್ತು ಎಕ್ಸ್ಚೇಂ ಜ್ ಬೋರ್ಡ್ ಆಫ್ ಇಂಡಿಯಾ (SEBI) ಗೆ ಕ್ಲೀ ನ್ ಚಿಟ್ ನೀಡಿದ ತನ್ನ ಸಮಿತಿಯ ವರದಿಯನ್ನು ಎತ್ತಿಹಿಡಿದಿದೆ. ಮಾತ್ರವಲ್ಲದೇ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ಮತ್ತು ಸೆಬಿಯಿಂದ ತನಿಖೆಯನ್ನು ವರ್ಗಾಯಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕ ರಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಸಿಎಎ ಜಾರಿಯನ್ನು ತಡೆಯಲು ಸಾಧ್ಯವಿಲ್ಲ'- ಅಮಿತ್‌ ಶಾಬಿಬಿಎಂಪಿ ಅಧಿಕಾರಿಗಳಿಂದ ಮಹಾ ಎಡವಟ್ಟು - ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಎಂ ಬದಲು BSY ಫೋಟೋ ಬಳಕೆರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮಾಮೋದಿ 3.02 ಕೋಟಿ ರೂ. ಮೌಲ್ಯದ ಆಸ್ತಿ ಘೋಷಣೆBreaking News: ಪ್ರಜ್ವಲ್ ರೇವಣ್ಣ ಬುಕ್ ಮಾಡಿದ್ದ ಫ್ಲೈಟ್ ಟಿಕೆಟ್ ಕ್ಯಾನ್ಸಲ್..!ಲೋಕಸಭಾ ಚುನಾವಣೆ ಬಳಿಕ ಮೊಬೈಲ್ ರೀಚಾರ್ಜ್ ಬೆಲೆ ಶೇ.25 ದುಬಾರಿಪ್ರಜ್ವಲ್ ಪೆನ್‌ಡ್ರೈವ್ ಹಂಚಿಕೆ ಪ್ರಕರಣ: 18 ಕಡೆ ಎಸ್‌ಐಟಿ ರೇಡ್ - ಪ್ರೀತಂ ಗೌಡ ಆಪ್ತನ ಮನೆಯಲ್ಲಿ ಸಿಕ್ಕಿದ್ದಾದರೂ ಏನು?PDO ಹುದ್ದೆಗಳ ಭರ್ತಿಗೆ ಇಂದೇ ಕೊನೆಯ ದಿನ, ಆಸಕ್ತರು ಅರ್ಜಿ ಸಲ್ಲಿಸಿDHFL ಹಗರಣ: 34,000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಧೀರಜ್ ವಾಧವನ್‌ ಅರೆಸ್ಟ್ಮನೆಯ ಯಜಮಾನಿ ಮೃತಪಟ್ಟರೆ ಗೃಹಲಕ್ಷ್ಮಿ ಹಣ ಯಾರ ಖಾತೆಗೆ ಹೋಗುತ್ತೆ ಗೊತ್ತೇ?