LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಮವಾಸ್ಯೆ ದಿನ ಸೂರಜ್ ರೇವಣ್ಣ ಸೀರೆ ಉಟ್ಟು ಬಳೆ ತೊಡ್ತಾರೆ - ಅಚ್ಚರಿ ಹೇಳಿಕೆ ನೀಡಿದ ಸಂತ್ರಸ್ತ

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್‌ ವಶದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಬಗ್ಗೆ ಸಂತ್ರಸ್ತ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸೂರಜ್‌ ರೇವಣ್ಣ ಅಮಾವಾಸ್ಯೆ ದಿನ ಬಳೆ ತೊಟ್ಟು, ಸೀರೆ ಉಡುತ್ತಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾನೆ. 2019ರ ಚುನಾವಣೆ ಸಂದರ್ಭದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದೆ. ಅರಕಲಗೂಡಿನಲ್ಲಿ ನನ್ನನ್ನು ಹೊಗಳಿ ನನ್ನ ಫೋನ್‌ ನಂಬರ್ ಅನ್ನು ತೆಗೆದುಕೊಂಡರು. ನಂತರ ಅವರ ವಿಸಿಟಿಂಗ್ ಕಾರ್ಡ್ ಕೊಟ್ಟರು. ನಂತರ ಅವರು ನನ್ನ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದರು ಎಂದಿದ್ದಾನೆ. ಸೂರಜ್ ರೇವಣ್ಣ ಅವರು Good Evening  ಮೆಸೇಜ್ ಜತೆ ಲವ್ ಸಿಂಬಲ್ ಕಳಿಸಿ ಮಾತು ಆರಂಭಿಸಿದರು. ಬಳಿಕ ಫಾರ್ಮ್‌ಹೌಸ್‌ಗೆ ಒಂಟಿಯಾಗಿ ಕರೆಸಿಕೊಂಡು ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಸಂತ್ರಸ್ತ ಜೆಡಿಎಸ್ ಕಾರ್ಯಕರ್ತ ಹೇಳಿದ್ದಾನೆ. ಸೂರಜ್ ರೇವಣ್ಣ ಕಾಮುಕ, ಹೊರಗೆ ಒಂದು ಮುಖ, ಒಳಗೆ ಇನ್ನೊಂದು ಮುಖ. ನಾಲ್ಕು ವರ್ಷದಿಂದ ಎಲ್ಲೂ ಹೇಳಿಕೊಳ್ಳೋಕೆ ನನಗೆ ಆಗಿರಲಿಲ್ಲ, ಮನಸ್ಸಿನಲ್ಲಿ ಕಾಡುತ್ತಿತ್ತು. ಒಂದು ದಿನ ನನ್ನ ಜೊತೆಗೆ ಸೂರಜ್ ರೇವಣ್ಣ ಮಾತಾಡುತ್ತಾ ನನ್ನ ಜೀವನ ಹೇಗೆ ಏನು ಅಂತ ಎಲ್ಲಾ ಕೇಳಿದ್ರು. ನಾನು ನನ್ನ ಕೆಲಸ, ಕುಟುಂಬದ ಬಗ್ಗೆ ಹೇಳಿದೆ. ಯಾವುದಕ್ಕೂ ಯೋಚನೆ ಮಾಡಬೇಡ ನಾನು ಇದ್ದೇನೆ ಎಂದು ಹೇಳಿ ರೂಮ್ ಒಳಗೆ ಕರೆದುಕೊಂಡು ಹೋದ್ರು. ನಂತರ ನನ್ನ ಕಾಲು ಒತ್ತುವಂತೆ ಹೇಳಿದರು. ನಾನು ಕಾಲು ಒತ್ತಿದೆ.. ಮುಂದೆ ಏನಾಯ್ತು ಅಂತ ನಾನು ಹೇಳಲು ಸಾಧ್ಯವಿಲ್ಲ ಎಂದು ಸಂತ್ರಸ್ತ ಯುವಕ ವಿವರಿಸಿದ್ದಾನೆ. ಸೂರಜ್ ರೇವಣ್ಣ ನನ್ನ ಮೇಲೆ ಎಸಗಿದ ಕೃತ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೆ. ಇದನ್ನು ಹೇಳಿದಾಗ, ಈ ವಿಚಾರ ಎಲ್ಲಿಯೂ ಹೇಳದಂತೆ 2 ಕೋಟಿ ರೂ. ಹಾಗೂ ಕೆಲಸದ ಆಮಿಷ ಒಡ್ಡಿದ್ದರು. ಒಪ್ಪದಿದ್ದಕ್ಕೆ ಜೀವಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತ ದೂರಿದ್ದಾನೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!