ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್ಎಸ್ ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು.!
ಬೆಂಗಳೂರು : ಪತ್ನಿಯ ಹೆಸರಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಸಚಿವ ಎನ್ಎಸ್ ಬೋಸರಾಜು ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚೆಂದ ಗೆಹ್ಲೊಟ್ ಅವರಿಗೆ ದೂರು ನೀಡಿದ್ದಾರೆ.!
ರಾಯಚೂರಿನಲ್ಲಿ ರಕ್ಷಿತಾರಣ್ಯ ಪ್ರದೇಶದಲ್ಲಿ 5 ಎಕರೆ 27 ಗುಂಟೆ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕುರಿತಂತೆ ರಾಯಚೂರು ಉಪವಲಯ ಅರಣ್ಯಾಧಿಕಾರಿ ತನಿಖೆ ನಡೆಸುತ್ತಿದ್ದು, ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. ಈ ಭಾಗದಲ್ಲಿ ಪ್ರತಿ ಚದರ ಅಡಿಗೆ ಕನಿಷ್ಟ 4 ಸಾವಿರ ರೂ. ದರ ಇದೆ. ಒಟ್ಟು ಭೂಮಿಗೆ ನೂರಾರು ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವಿದೆ.
ಎನ್ಎಸ್ ಬೋಸರಾಜು ಪತ್ನಿ ಕೃಷ್ಣವೇಣಿ ಅವರು 17 ಗುಂಟೆ ಜಮೀನನ್ನು ಕಬಳಿಸಿದ್ದಾರೆ ಎಂದು ದೂರಿದ್ದಾರೆ. ಭೂಮಿ ಒತ್ತುವರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸೃಜನಪಕ್ಷಪಾತ ಎಸಗಲಾಗಿದೆ. ಗುಂಪು ರಚನೆ ಮಾಡಿಕೊಂಡು ರಕ್ಷಿತಾರಣ್ಯವನ್ನು ಕಬಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೆಖಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.