LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌: ಸೂರಜ್‌ ಪರ ಇಂದು ಜಾಮೀನು ಅರ್ಜಿ ಸಲ್ಲಿಕೆ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಪರ ಇಂದು ಜಾಮೀನು ಅರ್ಜಿ ಸಲ್ಲಿಸುವುದಾಗಿ ಸೂರಜ್ ಪರ ವಕೀಲ ನಿಖಿಲ್ ಕಾಮತ್ ಮಾಹಿತಿ ನೀಡಿದ್ದಾರೆ.

ಸೂರಜ್‌ ರೇವಣ್ಣ ಅವರನ್ನ ಬಂಧಿಸಿದ್ದ ಹಾಸನ ಹೊಳೆನರಸೀಪುರ ಪೊಲೀಸರು ಕೋರಮಂಗಲದಲ್ಲಿರುವ 42ನೇ ಎಸಿಎಂಎಂ ನ್ಯಾಯಾಧೀಶರಾದ ಶಿವಕುಮಾರ್ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ರಾಜು ಸರ್ಕಾರದಿಂದ ಕೇಸ್‌ ಸಿಐಡಿಗೆ ವರ್ಗಾವಣೆ ಆಗಿರುವ ಆದೇಶವಾಗಿದೆ. ಆದ್ರೆ ಅಧಿಕೃತವಾಗಿ ಕೇಸ್‌ ದಾಖಲಾಗಿಲ್ಲ. ಆದ ಕಾರಣ ಸಿಐಡಿ ಅಧಿಕಾರಿಗಳು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರಾಗಿಲ್ಲ. ಕಸ್ಟಡಿಗೆ ಬೇಕಿದ್ದರೆ ಓಪನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಪಡೆಯಿರಿ ಅಂತ ನ್ಯಾಯಾಧೀಶರು ಸೂಚಿಸಿ, ನ್ಯಾಯಾಧೀಶರು ಸೂರಜ್‌ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಪ್ರಕಟಿಸಿದರು.

ಸಂತ್ರಸ್ತನ ವಿರುದ್ಧ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಸೂರಜ್ ರೇವಣ್ಣ ಶನಿವಾರ ಸಂಜೆ ಹಾಸನದ ಸೆನ್ ಠಾಣೆಗೆ ತೆರಳಿದ್ದರು. ಈ ವೇಳೆ ಸೂರಜ್ ರೇವಣ್ಣರನ್ನ ವಶಕ್ಕೆ ಪಡೆದ ಹಾಸನ ಪೊಲೀಸರು ಮುಂಜಾನೆಯವರೆಗೂ ಸುದೀರ್ಘ ವಿಚಾರಣೆಗೆ ಒಳಪಡಿಸಿದರು. ಭಾನುವಾರ ಬೆಳಗ್ಗಿನ ಜಾವ ಸೂರಜ್‌ರನ್ನ ಅಧಿಕೃತವಾಗಿ ಬಂಧಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST