LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಸ್ಸಾಂನಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ: ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರ ಬಂಧನ

ಗುವಾಹಟಿ: ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಆಯೋಜಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಬಜರಂಗದಳದ ಇಬ್ಬರು ಸದಸ್ಯರನ್ನು ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಲ್ಡೊಯಿಯಲ್ಲಿರುವ ಮಹರ್ಷಿ ವಿದ್ಯಾ ಮಂದಿರ ಶಾಲೆಯ ಆವರಣದಲ್ಲಿ ಶಿಬಿರವನ್ನು ಆಯೋಜಿಸಿದ್ದಕ್ಕಾಗಿ ಬಜರಂಗದಳದ ಇಬ್ಬರು ಸದಸ್ಯರಾದ ಬಿಜೋಯ್ ಘೋಷ್ ಮತ್ತು ಗೋಪಾಲ್ ಬೋರೊ ಅವರನ್ನು ಬಂಧಿಸಲಾಗಿದೆ ಎಂದು ದರ್ರಾಂಗ್ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಸೋನೊವಾಲ್ ಪಿಟಿಐಗೆ ತಿಳಿಸಿದ್ದಾರೆ. ಕೋರ್ಟ್ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಶಾಲೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರದಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲು ತನಿಖೆ ನಡೆಯುತ್ತಿದೆ” ಎಂದು ಅವರು ಹೇಳಿದ್ದಾರೆ. ಶಸ್ತ್ರಾಸ್ತ್ರ ತರಬೇತಿ ಶಿಬಿರಕ್ಕೆ ಅನುಮತಿ ನೀಡಿದ ಆರೋಪದ ಮೇಲೆ ಕಳೆದ ಮಂಗಳವಾರ ಶಾಲೆಯ ಪ್ರಾಂಶುಪಾಲರಾದ ಹೇಮಂತ ಪಯೆಂಗ್ ಮತ್ತು ಶಾಲೆಯ ಆಡಳಿತಾಧಿಕಾರಿ ರತನ್ ದಾಸ್ ಅವರನ್ನು ಬಂಧಿಸಲಾಗಿದೆ ಎಂದು ಸೋನೊವಾಲ್ ಅವರು ತಿಳಿಸಿದ್ದಾರೆ. “ಪಯೆಂಗ್ ಮತ್ತು ದಾಸ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ನಾವು ಪ್ರಸ್ತುತ ಸಂಘಟನೆಯ ಇತರ ಸದಸ್ಯರನ್ನು ಹುಡುಕುತ್ತಿದ್ದೇವೆ” ಎಂದು ಎಸ್ಪಿ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆ