LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆನೆ ಚಿಕಿತ್ಸೆಗೆ ಪಾದರಕ್ಷೆ, ಮೈಸೂರು ಪಶುವೈದ್ಯರ‌ ವಿಭಿನ್ನ ಪ್ರಯತ್ನ ಯಶಸ್ಸು

ಪಶು ವೈದ್ಯರು ಆನೆಯೊಂದರ ಚಿಕಿತ್ಸೆಗಾಗಿ ಅಳವಡಿಸಿಕೊಂಡಿರುವ ವಿಶೇಷ ವಿಭಿನ್ನವಾದ ಕ್ರಮ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಗಾಯಗೊಂಡ ಆನೆಗೆ ಚಿಕಿತ್ಸೆ ನೀಡಲೆಂದು ಆನೆಗೆ ಪಾದರಕ್ಷೆ ತಯಾರಿಸಲಾಗಿದೆ.

ಹುಣಸೂರು ತಾಲೂಕಿನ ದೊಡ್ಡ ಹರವೆ ಆನೆ ಕ್ಯಾಂಪ್‌ನಲ್ಲಿರುವ 60 ವರ್ಷದ ಕುಮಾರಿ ಆನೆಯ ಕಾಲಿಗೆ ಗಾಯವಾಗಿತ್ತು. ಕುಮಾರಿ ಆನೆಯನ್ನು 2015ರಲ್ಲಿ ಕೇರಳ ಮೂಲದ ಸರ್ಕಸ್ ಕಂಪನಿಯಿಂದ ರಕ್ಷಣೆ ಮಾಡಿ ಕರೆತರಲಾಗಿತ್ತು. ಅಂದಿನಿಂದ ಕುಮಾರಿ ಆನೆ ದೊಡ್ಡ ಹರವೆ ಆನೆ ಕ್ಯಾಂಪ್‌ನಲ್ಲಿ ಅಶ್ರಯ ಪಡೆದು ಆರಾಮಾಗಿತ್ತು.

ಕೆಲ ದಿನಗಳ ಹಿಂದೆ ಕುಮಾರಿ ಆನೆಯ ಬಲಗಾಲಿಗೆ ಗಾಯವಾಗಿದೆ. ತಕ್ಷಣ ವೈದ್ಯರ ತಂಡ‌ ಕುಮಾರಿ ಆನೆಗೆ ಔಷಧ ಸಿದ್ದಪಡಿಸಿ ಹಚ್ಚಲಾಗಿತ್ತು. ಆದರೆ ಗಾಯದ ಸ್ಥಳದಲ್ಲಿ ಔಷಧಿ ನಿಂತಿಲ್ಲ. ಔಷಧಿ ಮಣ್ಣು ಪಾಲಾಗುತಿತ್ತು. ಇದರಿಂದ ಆನೆಯ ಕಾಲಿನ ಗಾಯ ವಾಸಿಯಾಗಿಲ್ಲ. ಎಷ್ಟೇ ಪ್ರಯತ್ನ ಪಟ್ಟರು ಆನೆಯ ಕಾಲಿಗೆ ಔಷಧಿಯನ್ನು ಹಚ್ಚಲು ಸಾಧ್ಯವಾಗಿಲ್ಲ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೈದ್ಯರಾಗಿರುವ ಡಾ ರಮೇಶ್ ಹೊಸ ಚಿಕಿತ್ಸಾ ವಿಧಾನ ಕಂಡು ಹಿಡಿದಿದ್ದಾರೆ. ಆನೆಗಾಗಿ ವಿಶೇಷ ಪಾದರಕ್ಷೆಯನ್ನು ತಯಾರಿಸಿದ್ದಾರೆ. ವಾಹನದ ಟೈರ್‌ ಬಳಸಿಕೊಂಡು ಪಾದರಕ್ಷೆಯೊಂದನ್ನು ತಯಾರಿಸಿದ್ದಾರೆ. ನಂತರ ಔಷಧಿಯನ್ನು ಪಾದರಕ್ಷೆಗೆ ಹಚ್ಚಿ ಕುಮಾರಿ ಆನೆಯ ಕಾಲಿಗೆ ಅಳವಡಿಸಿದ್ದಾರೆ. ಡಾ ರಮೇಶ್ ಪ್ರಯತ್ನ ಯಶಸ್ವಿಯಾಗಿದೆ. ಔಷಧಿಯ ಪರಿಣಾಮ ಕುಮಾರಿ ಆನೆಯ ಕಾಲಿಗ ಗಾಯ ವಾಸಿಯಾಗುತ್ತಿದೆ. ಕುಮಾರಿ ಆನೆ ನೋವು ಕಡಿಮೆಯಾಗಿದ್ದು ಮತ್ತೆ ಉತ್ಸಾಹದಿಂದ ಓಡಾಡುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜ.13 ಕ್ಕೆ KCET ಪರೀಕ್ಷೆ - ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!