ಆನ್ಲೈನ್ ಬೆಟ್ಟಿಂಗ್ಗೆ ಯುವಕನೊಬ್ಬ ಆತ್ಮಹತ್ಯೆಗೆ ಶರಣು.!
ಬಾಗಲಕೋಟೆ :ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಘಟನೆ ಸಂಭವಿಸಿದೆ.
ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ.
ಈ ಹಿಂದೆ ರಮೇಶ್ ಮಾಡಿಕೊಂಡಿದ್ದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಮತ್ತೆ ಆನ್ಲೈನ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ಧಿವಾದ ಸಹ ಹೇಳಿದ್ದರು. ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.