LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರೋಗ್ಯ ವೃದ್ಧಿಸುವ ನೀಲಿ ಶಂಖಪುಷ್ಪ: ಇಲ್ಲಿದೆ ಉಪಯುಕ್ತ ಮಾಹಿತಿ

ಹಿತ್ತಲ ಗಿಡ ಮದ್ದಲ್ಲ ಎನ್ನುವ ಮಾತಿದೆ. ಆದರೆ ನಮ್ಮ ಮನೆಯಲ್ಲಿ ಇರುವ ಗಿಡಗಳಿಂದಲೇ ಹಲವಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆಯುರ್ವೇದದಲ್ಲಿ ಬಹು ಮಹತ್ವ ಪಡೆದ ಹಲವು ಗಿಡಮೂಲಿಕೆಗಳು ನಮ್ಮ ಸುತ್ತಮುತ್ತಲಿನಲ್ಲಿಯೇ ಇದ್ದರೂ ನಮ್ಮ ಗಮನಕ್ಕೆ ಬಾರದೆ ಇದ್ದುಬಿಡುತ್ತವೆ.

ಅಂತಹವುಗಳಲ್ಲಿ ನೀಲಿಶಂಖಪುಷ್ಪ ಕೂಡ ಒಂದು. ಸಾಮಾನ್ಯವಾಗಿ ಬೇಸಿಗೆಯ ನಂತರ ಮಳೆಗಾಲದ ಆರಂಭದ ದಿನಗಳಲ್ಲಿ ಬಿಡುವ ಈ ಹೂವು ಶಿವನಿಗೂ ಅತ್ಯಂತ ಪ್ರಿಯ. ಅದೇ ರೀತಿ ಆರೋಗ್ಯ ವೃದ್ಧಿಗೂ ಅಷ್ಟೇ ಸಹಕಾರಿ,. ಇದೇ ಕಾರಣದಿಂದಲೇ ಅನಾದಿ ಕಾಲದಿಂದಲೂ ನೀಲಿ ಶಂಖಪುಷ್ಟದ ಬಳಕೆಯಿದೆ. ಸಂಸ್ಕೃತದಲ್ಲಿ ಗಿರಿಕರ್ಣಿಕ ಎಂದು ಕರೆಯಲ್ಪಡುವ ಈ ಹೂವು ಶಿವನ ಪೂಜೆಯಲ್ಲಿ ಮಹತ್ವದ ಸ್ಥಾನ ಹೊಂದಿದೆ. ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ಈ ನೀಲಿ ಶಂಖಪುಷ್ಟ ಹೆಚ್ಚು ಕಾಣಿಸಿಕೊಳ್ಳುತ್ತದೆ. ಈ ಶಂಖಪುಷ್ಪದ ಹೂವಿನ ಪಕಳೆಗಳನ್ನು ಒಣಗಿಸಿ ಟೀಯನ್ನು ಕೂಡ ಮಾಡಿ ಸೇವಿಸುತ್ತಾರೆ. ನೀಲಿಶಂಖ ಪುಷ್ಟ ಯಾವೆಲ್ಲಾ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎನ್ನುವ ಮಾಹಿತಿ ಇಲ್ಲಿದೆ.

ಈ ಹೂವಿನ ಶಕ್ತಿಯುತವಾದ ಉತ್ಕರ್ಷಣ ನಿರೋಧಕಗಳು ಏಕಾಗ್ರತೆಗೆ ಸಹಾಯ ಮಾಡುತ್ತದೆ ಮತ್ತು ಮೆದುಳನ್ನು ಶಾಂತಗೊಳಿಸುತ್ತದೆ. ಪರೀಕ್ಷೆಯ ತಯಾರಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಇದು ಪ್ರಯೋಜನಕಾರಿಯಾಗಿದೆ. ನೀಲಿಶಂಖಪುಷ್ಪ ದೀರ್ಘಕಾಲ ಕೆಲಸ ಮಾಡಿ ಉಂಟಾದ ಮಾನಸಿಕ ಆಯಾಸವನ್ನು ಕಡಿಮೆ ಮಾಡುತ್ತದೆ. ಜತೆಗೆ ಒತ್ತಡವನ್ನು ನಿವಾರಿಸುತ್ತದೆ. ಖಿನ್ನತೆಯಿರುವ ಜನರು ತಮ್ಮ ದಿನಚರಿಯಲ್ಲಿ ನೀಲಿಶಂಖಪುಷ್ಪವನ್ನು ಬಳಕೆ ಮಾಡುವುದು ಒಳಿತು. ಏಕೆಂದರೆ ಇದು ಮೆದುಳಿನ ರಾಸಾಯನಿಕಗಳಾದ ನ್ಯೂರೋಟ್ರಾನ್ಸ್‌ಮಿಟರ್‌ಗಳು ಮತ್ತು ಡೋಪಮೈನ್ನ ಸ್ರವಿಸುವಿಕೆಯನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಜತೆಗೆ ಇದು ಸಿರೊಟೋನಿನ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

ಆತಂಕದ ವಿವಿಧ ಲಕ್ಷಣಗಳಾದ, ಚಡಪಡಿಕೆ, ಅಸ್ವಸ್ಥತೆ, ತಣ್ಣನೆಯ ಕೈಗಳು ಮತ್ತು ಪಾದಗಳನ್ನು ರಕ್ಷಿಸಿ ವ್ಯಕ್ತಿಯನ್ನು ಮಾನಸಿಕವಾಗಿ ಬಲಗೊಳಿಸುತ್ತದೆ. ಈ ಹೂವುಗಳಲ್ಲಿನ ಎಥೋಲಿಕ್ ಸಾರವು ಅಪಾಯ ತರುವ ಕೊಬ್ಬಿನಾಮ್ಲಗಳ ಮಟ್ಟವನ್ನು ಕಡಿಮೆ ಮಾಡುತ್ತದೆ, ಇದರಿಂದ ಹೃದಯಾಘಾತ, ಹೃದಯಾಘಾತ, ರಕ್ತ ಹೆಪ್ಪುಗಟ್ಟುವಿಕೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಜೀರ್ಣ ಶಕ್ತಿಯನ್ನು ಉತ್ತಮಗೊಳಿಸಿ, ಹಸಿವು ಹೆಚ್ಚುವಂತೆ ಮಾಡುತ್ತದೆ.

ಆದ್ದರಿಂದ ಆಯುರ್ವೇದದಲ್ಲಿ ನೀಲಿ ಶಂಖಪುಷ್ಪವನ್ನು ಹೆಚ್ಚು ಬಳಕೆ ಮಾಡುತ್ತಾರೆ. ನೀಲಿ ಶಂಖಪುಷ್ಪ ಹೂವುಗಳು ಮೂತ್ರಕೋಶದ ಕಾಯಿಲೆಗಳನ್ನು ಗುಣಪಡಿಸುವಲ್ಲಿ ಸಹಾಯಕವಾಗಿದೆ. ಅಲ್ಲದೆ ವೀರ್ಯ ದುರ್ಬಲತೆ ಸಮಸ್ಯೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ ಎನ್ನುತ್ತಾರೆ ತಜ್ಞರು. ದೇಹದ ಅತಿಯಾದ ತೂಕ ಇಳಿಕೆಯಲ್ಲಿಯೂ ನೀಲಿ ಶಂಖಪುಷ್ಪದ ಹೂವುಗಳನ್ನು ಬಳಸಲಾಗುತ್ತದೆ. ಈ ಹೂವುಗಳ ಎಸಳುಗಳನ್ನು ಟೀ ಯಲ್ಲಿ ಬೆರೆಸಿ ಸೇವಿಸಿದರೆ ದೇಹದ ತೂಕ ಕಡಿಮೆಯಾಗುತ್ತದೆ ಎನ್ನುತ್ತಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡಬಿಸಿಲಿನ ತಾಪಕ್ಕೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ ಸರ್ಕಾರಕ್ರಿಕೆಟ್‌ನಲ್ಲಿ ಬಳಸಲಾಗುವ ಕ್ಯಾಮೆರಾಗಳ ಬೆಲೆ ಎಷ್ಟು ಗೊತ್ತಾ?ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನಭಾರತ ತಂಡಕ್ಕೆ ಮೊಹಮ್ಮದ್ ಸಿರಾಜ್ ಮತ್ತೆ ಆಯ್ಕೆವಿಶ್ವದ 10 ಅತ್ಯಂತ ಭ್ರಷ್ಟ ದೇಶಗಳು ಯಾವುವು? - ಭಾರತ ಎಷ್ಟೇ ಸ್ಥಾನದಲ್ಲಿದೆ ಗೊತ್ತಾ?2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಫೈನಲ್ - ಜಸ್ಪ್ರೀತ್ ಬುಮ್ರಾ ಔಟ್ಕೋಚಿಂಗ್ ಪಡೆಯದೆ UPSCಯಲ್ಲಿ 6ನೇ ರ್‍ಯಾಂಕ್‌ ಪಡೆದ ಗೆಹಾನಾ ನವ್ಯಾ ಜೇಮ್ಸ್