LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟ ಪಾಕಿಸ್ತಾನ – ವಿಮಾನಯಾನ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ

ಆರ್ಥಿಕ ಬಿಕ್ಕಟ್ಟಿನ ಕಾರಣದಿಂದ ಪಾಕಿಸ್ತಾನದ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಹಂತದಲ್ಲಿದೆ.

ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಾಗಿ 13 ಗುತ್ತಿಗೆ ವಿಮಾನಗಳಲ್ಲಿ 5 ವಿಮಾನಗಳನ್ನು ರದ್ದುಗೊಳಿಸಿದ್ದು ಇನ್ನೂ 4 ವಿಮಾನಗಳು ರದ್ದಾಗುವ ಸಾಧ್ಯತೆ ಇದೆ.

ಪಾಕಿಸ್ತಾನಕ್ಕೆ ತಕ್ಷಣ ಸುಮಾರು 636 ಕೋಟಿ ರೂಪಾಯಿಗಳ ಅಗತ್ಯವಿದೆ. ಇಂಧನದ ಹಣ ಪಾವತಿಸದ ಕಾರಣ ಅನೇಕ ಗಲ್ಫ್ ರಾಷ್ಟ್ರಗಳು ಪಾಕಿಸ್ತಾನಕ್ಕೆ ವಿಮಾನ ಹಾರಾಟವನ್ನು ನಿಲ್ಲಿಸಿದೆ. ಒಟ್ಟು ಆಸ್ತಿಗಿಂತ 5 ಪಟ್ಟು ಹೆಚ್ಚು ಅಂದರೆ ಸುಮಾರು 20 ಸಾವಿರ ಕೋಟಿ ರೂ. ಗಿಂತ ಹೆಚ್ಚಿನ ಸಾಲವನ್ನು ಅದು ಹೊಂದಿದೆ ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆ ವರದಿ ಮಾಡಿದೆ.

ತುರ್ತಾಗಿ ಹಣ ಪಾವತಿ ಮಾಡದೇ ಇದ್ದರೆ ವಿಮಾನಯಾನ ಸಂಸ್ಥೆಯ ಎಲ್ಲ ವಿಮಾನಗಳ ಸೇವೆ ಹಾಗು ಪಿಐಎ ಬೋಯಿಂಗ್ ಮತ್ತು ಏರ್‌ಬಸ್ ವಿಮಾನದ ಬಿಡಿ ಭಾಗಗಳ ಪೂರೈಕೆ ಸೆಪ್ಟೆಂಬರ್ ಮಧ್ಯದ ವೇಳೆಗೆ ನಿಲ್ಲಬಹುದು. ಆದರೆ ಪಿಐಎ ಹಣ ಪಾವತಿ ಬಗ್ಗೆ ಲಿಖಿತ ಭರವಸೆ ನೀಡಿದ್ದರಿಂದ ಸದ್ಯ ವಿಮಾನಯಾನ ಸೇವೆಗಳನ್ನು ಮುಂದುವರಿಸಲಾಗಿದೆ ಎಂದು ಪಿಐಎ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನ ಇಸ್ಲಾಮಾಬಾದ್ ವಿಮಾನ ನಿಲ್ದಾಣವನ್ನು ಗುತ್ತಿಗೆ ಆಧಾರದ ಮೇಲೆ ನೀಡಲು ನಿರ್ಧರಿಸಿದೆ ಎಂದು ಪಾಕಿಸ್ತಾನದ ವಿಮಾನಯಾನ ಸಚಿವ ಖವಾಜಾ ಸಾದ್ ರಫೀಕ್ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸುಧಾರಿಸಲು, ಅದನ್ನು 15 ವರ್ಷಗಳವರೆಗೆ ಖಾಸಗಿ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗುವುದು. ಇದರರ್ಥ ಸರ್ಕಾರ ವಿಮಾನ ನಿಲ್ದಾಣವನ್ನು ಮಾರಾಟ ಮಾಡುತ್ತಿದೆ ಎಂದಲ್ಲ, ಉತ್ತಮ ನಿರ್ವಾಹಕರನ್ನು ವಿಮಾನ ನಿಲ್ದಾಣದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಈ ರೀತಿ ಮಾಡಲಾಗುತ್ತಿದೆ ಎಂದು ಸಾದ್ ರಫೀಕ್ ಸ್ಪಷ್ಟಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’ರಾಯರ ಮಠದಲ್ಲಿ ನಡೀತು ಪವಾಡ, ವೀಲ್ ಚೇರಲ್ಲಿ ಬಂದವಳು, ನಡೆದು ಹೋದಳು.!ಉಕ್ರೇನ್ ಮೇಲೆ 158 ಡ್ರೋನ್‌ ದಾಳಿ ನಡೆಸಿದ ರಷ್ಯಾ ಸೇನೆಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯ