LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆ.31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲವಾದಲ್ಲಿ ರೇಷನ್ ಬಂದ್

ಪಡಿತರ ಚೀಟಿದಾರರು  ಆಗಸ್ಟ್ 31ರೊಳಗೆ ನಿಮ್ಮ ಕುಟುಂಬದ ಎಲ್ಲ ಸದಸ್ಯರ ‘ಈ-ಕೆವೈಸಿ’  ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ಈ ನಿಯಮವನ್ನು ಸಂಪೂರ್ಣವಾಗಿ ಪಾಲಿಸಲು ರಾಜ್ಯ ಸರ್ಕಾರವು ಕಠಿಣ ಕ್ರಮಗಳನ್ನು ಕೈಗೊಳ್ಳಲಿದ್ದು, ‘ಈ-ಕೆವೈಸಿ’ ಪೂರ್ಣಗೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳ್ಳಲಿದೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಅವಿನ್ ಆರ್. ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ಪಡಿತರ ಚೀಟಿದಾರರು ತಮ್ಮ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಹೋಗಿ, ಬೆಳಿಗ್ಗೆ 7.00 ಗಂಟೆಯಿಂದ ರಾತ್ರಿಯ 9.00 ಗಂಟೆಯೊಳಗೆ ಈ-ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ಮಾಡಿಸಿಕೊಳ್ಳಬಹುದು.

ಈ-ಕೆವೈಸಿ ಪ್ರಕ್ರಿಯೆ ಏಕೆ ಕಡ್ಡಾಯವಾಗಿದೆ?

ಈ-ಕೆವೈಸಿ ಪ್ರಕ್ರಿಯೆ ಮೂಲಕ ಪಡಿತರ ಚೀಟಿದಾರರ ಬಗ್ಗೆ ಸರಿಯಾದ ಮಾಹಿತಿ ಪಡೆಯುವುದು ಹಾಗೂ ಹಗರಣಗಳನ್ನು ತಡೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಈಗಿನ ಪಡಿತರ ವ್ಯವಸ್ಥೆಯಲ್ಲಿ ಕೆಲವರು ಅನಧಿಕೃತವಾಗಿ ಪಡಿತರ ಪಡೆಯುತ್ತಿರುವುದು ಕಂಡುಬಂದಿದೆ.  ಇಂತಹ ದುರ್ಪಯೋಗವನ್ನು ತಪ್ಪಿಸುವುದು ಹಾಗೂ ಸರಿಯಾದ ಅರ್ಹರು ಮಾತ್ರ ಪಡಿತರ ಪಡೆಯಲು ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಪಡ್ಡಿತರ ಸ್ಥಗಿತ:

ಆಗಸ್ಟ .31 ರೊಳಗೆ ಈ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದ ಚೀಟಿದಾರರು ತಮ್ಮ ಪಡಿತರ ಹಂಚಿಕೆಯನ್ನು ಮುಂದಿನ ತಿಂಗಳುಗಳಿಂದ ಪಡೆಯಲು ಸಾಧ್ಯವಿರುವುದಿಲ್ಲ. ಇದು ಸಾಮಾನ್ಯ ಜನರ ಮೇಲೆ ತೀವ್ರ ಪರಿಣಾಮ ಬೀರಬಹುದಾದ್ದರಿಂದ, ಈ ಸಮಯಾವಕಾಶವನ್ನು ದುಡಿಸಿಕೊಳ್ಳುವಂತೆ ಅವಿನ್ ಆರ್. ಅವರು ಸೂಚಿಸಿದ್ದಾರೆ. ಇದು ಪಡಿತರ ವ್ಯವಸ್ಥೆಯ ಸುಧಾರಣೆಗಾಗಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದ್ದು, ಎಲ್ಲರಿಗೂ ಅನುಕೂಲವಾಗಲು ಮತ್ತು ಯಾವುದೇ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯ