LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂಡಿಯಾ ಮೈತ್ರಿ ಕೂಟವು ನಮ್ಮ ನಂಬಿಕೆಯನ್ನು ಘಾಸಿಗೊಳಿಸುತ್ತಲೇ ಇರುತ್ತದೆ - ಪ್ರಧಾನಿ ಮೋದಿ

ಕೇರಳ: ಲೂಟಿಗೆ ಕೇರಳದಲ್ಲಿ ಸಂಪೂರ್ಣ ಸ್ವಾತಂತ್ರ್ಯ ಬೇಕು ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಬಡವರಿಗೆ ಮತ್ತು ಮೂಲಸೌಕರ್ಯಕ್ಕೆ ಸಿಗುತ್ತಿರುವ ಹಣದ ಬಗ್ಗೆ ಯಾರೂ ಪ್ರಶ್ನಿಸುವುದು ಅವರಿಗೆ ಇಷ್ಟವಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಆರೋಪಿಸಿದರು.

ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯದ ನಂತರ, ಎಲ್‌ಡಿಎಫ್ ಮತ್ತು ಯುಡಿಎಫ್ ಸರ್ಕಾರಗಳು ‘ನಾರಿ ಶಕ್ತಿ’ಯನ್ನು ದುರ್ಬಲವೆಂದು ಪರಿಗಣಿಸಿದವು. ಅಲ್ಲದೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಕಾನೂನನ್ನು ಅವರು ತಡೆಹಿಡಿದರು ಆದರೆ ಮೋದಿ ನಿಮಗೆ ನಿಮ್ಮ ಹಕ್ಕುಗಳನ್ನು ನೀಡುವ ಭರವಸೆ ನೀಡಿದರು ಮತ್ತು ಅದನ್ನು ಈಡೇರಿಸಿದ್ದೇನೆ ಎಂದರು.

ಇಂಡಿಯಾ ಮೈತ್ರಿ ಕೂಟವು ನಮ್ಮ ದೇವಸ್ಥಾನಗಳು ಮತ್ತು ಹಬ್ಬಗಳನ್ನು ಲೂಟಿಗೆ ದಾರಿಮಾಡಿಕೊಂಡಿದ್ದಾರೆ. ‘ತ್ರಿಶೂರ್ ಪೂರಂ’ನಲ್ಲಿ ನಡೆಯುತ್ತಿರುವ ರಾಜಕೀಯ ದುರದೃಷ್ಟಕರ. ಶಬರಿಮಲೆಯಲ್ಲಿ ನಡೆದಿರುವ ದುರಾಡಳಿತದಿಂದ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇದು ಇಲ್ಲಿಯ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಎಂದು ಉಲ್ಲೇಖಿಸಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ ಸರ್ಕಾರ ಇರುವವರೆಗೂ ತ್ರಿವಳಿ ತಲಾಖ್ ನಿಂದಾಗಿ ಮುಸ್ಲಿಂ ಸಹೋದರಿಯರು ನರಳುತ್ತಿದ್ದರು. ಆದರೆ ಅದರಿಂದ ಮುಕ್ತಿ ನೀಡುವ ಭರವಸೆ ನೀಡಿ ಪ್ರಾಮಾಣಿಕವಾಗಿ ಈಡೇರಿಸಿರುವುದಾಗಿ ಅವರು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿಇಂದಿನಿಂದ ಮೇ 16ರವರೆಗೆ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!'ಸೈಬರ್‌ಕ್ರೈಮ್‌ ವಿರುದ್ದ ಸಮರ': ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಹ್ಯಾಂಡ್‌ಸೆಟ್‌ ಬ್ಲಾಕ್ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ಪ್ರಜ್ವಲ್ ರೇವಣ್ಣ ನಾಪತ್ತೆ: ಹುಡುಕಿ ಕೊಟ್ಟವರಿಗೆ ನಗದು ಬಹುಮಾನ ಘೋಷಣೆಹೀರೆಕಾಯಿ ಸಿಪ್ಪೆ ಚಟ್ನಿ ಮಾಡಿ ಸವಿಯಿರಿ‘ಕರಿಬೇವಿ’ನಲ್ಲಿದೆ ಈ ಆರೋಗ್ಯ ಭಾಗ್ಯಪ್ರಜ್ವಲ್ ರೇವಣ್ಣ ಅಶ್ಲೀ ಲ ವೀಡಿಯೋ ಕೇಸ್‌- ದೇವರಾಜೇ ಗೌಡ ಅರೆಸ್ಟ್‌ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ.!ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ