LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ

 

ದೆಹಲಿ: ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು ಕೇಂದ್ರ ಸರ್ಕಾರದ 2024- 25 ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ.

ಅಧಿವೇಶನದ ಮೊದಲ ದಿನವಾದ ಸೋಮವಾರ ಆರ್ಥಿಕ ಸಮೀಕ್ಷಾ ವರದಿಯನ್ನು ನಿರ್ಮಲಾ ಸೀತಾರಾಮನ್ ಮಂಡಿಸುವರು. ಮುಂಗಾರು ಅಧಿವೇಶನದಲ್ಲಿ ಒಟ್ಟು ಆರು ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. 1934ರ ಏರ್ ಕ್ರಾಫ್ಟ್ ಕಾಯ್ದೆ ರದ್ದುಪಡಿಸಿ ಹೊಸ ಕಾಯ್ದೆ ತರಲು ಭಾರತೀಯ ವಾಯುಯಾನ ವಿಧೇಯಕ ಮಂಡಿಸಲಾಗುವುದು. 2024ನೇ ಸಾಲಿನ ಹಣಕಾಸು ಮಸೂದೆ, ಸ್ವಾತಂತ್ರ್ಯ ಪೂರ್ವಕ್ಕಿಂತ ಹಳೆಯ ಕಾಯ್ದೆಯನ್ನು ಬದಲಿಸಲು ಬಾಯ್ಲರ್ಸ್ ಮಸೂದೆ, ಕಾಫಿ ಮಸೂದೆ, ರಬ್ಬರ್ ಮಸೂದೆ, ವಿಪತ್ತು ನಿರ್ವಹಣೆ ತಿದ್ದುಪಡಿ ಮಸೂದೆಗಳನ್ನು ಮಂಡಿಸಿ ಅಂಗೀಕಾರ ಪಡೆಯಲು ತೀರ್ಮಾನಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದರು. ನಂತರ ಲೋಕಸಭೆ ಚುನಾವಣೆ ನಡೆದು ಹೊಸ ಸರ್ಕಾರ ಬಂದಿರುವುದರಿಂದ ಮಂಗಳವಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ