LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಂದಿನಿಂದ ಹಾಸನಾಂಬ ದೇವಿಯ ದರ್ಶನ.! ಇಷ್ಟು ದಿನ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ.!

 

ಹಾಸನ: ಇಂದು ಅಕ್ಟೋಬರ್ 24 ಮಧ್ಯಾಹ್ನ 12 ಗಂಟೆಗೆ ತೆರೆಯಲಾಗುವುದು. 9 ದಿನಗಳ ಕಾಲ ಭಕ್ತರಿಗೆ ದೇವಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ದೇವಾಲಯದಲ್ಲಿ ರಾಜಮನೆತನದ ನರಸಿಂಹರಾಜ ಅರಸು ಬಾಳೆಕಂದು ಕತ್ತರಿಸಿದ ನಂತರ ಗರ್ಭಗುಡಿಗೆ ಪೂಜೆ ಸಲ್ಲಿಸಿ ಬಾಗಿಲು ತೆರೆಯಲಾಗುವುದು. ನವೆಂಬರ್ 3ರಂದು ಪುನಃ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗುವುದು. ದೇವಿ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಯವರ ಮತ್ತು ಎಲ್ಲಾ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ  ಬಾಗಿಲನ್ನು ತೆರೆಯಲಾಗುವುದು.

ಒಟ್ಟು 11 ದಿನದಲ್ಲಿ 9 ದಿನ ಮಾತ್ರ ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.  ದಿನದ 24 ಗಂಟೆಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಸಲಾಗಿದೆ. ಭಕ್ತರ ದರ್ಶನಕ್ಕೆ ಅವಶ್ಯವಿರುವ ಮೂಲಭೂತ ಸೌಕರ್ಯಗಳಾದ ನೆರಳು, ಜರ್ಮನ್ ಟೆಂಟ್, ಬ್ಯಾರಿಕೇಡಿಂಗ್, ಫ್ಯಾನ್ಸ್, ಮ್ಯಾಟ್ ವ್ಯವಸ್ಥೆ ಕಲ್ಪಿಸಲಾಗಿದೆ.

ಹಾಸನಾಂಭ ದೇವಾಲಯದ ಆ್ಯಪ್ ರೂಪಿಸಿ ಲೋಕಾರ್ಪಣೆ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಾದ ಯು-ಟ್ಯೂಬ್, ಫೇಸ್ಬುಕ್ ಮೂಲಕವೂ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ದೇವಿ ದರ್ಶನದ ಕುರಿತು ಹಾಸನಾಂಭ ಆ್ಯಪ್ ಮೂಲಕ ಸಮಗ್ರ ಮಾಹಿತಿ ಪಡೆಯಲು ಕ್ರಮಕೈಗೊಳ್ಳಲಾಗಿದೆ.!

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟ್ರ್ಯಾಕ್ಟರ್ ಚಲಾಯಿಸುವಾಗ ಹೆಲ್ಮೆಟ್ ಕಡ್ಡಾಯವೇ? ಸಕಲೇಶಪುರದಲ್ಲಿ ಅಚ್ಚರಿ ನೋಟೀಸ್ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ, ಗೌರವಧನ 2 ಸಾವಿರ ರೂ ಹೆಚ್ಚಳಮೌಂಟ್ ಎವರೆಸ್ಟ್ ಇಳಿಯುವಾಗ ಭಾರತೀಯ ಪರ್ವತಾರೋಹಿ ಮೃತ್ಯುಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನನಾಳೆಯಿಂದ ಭಾರೀ ಮಳೆ ಮುನ್ಸೂಚನೆ: 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ'ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ' - ಸಿಎಂ'ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೇ'- ಸಚಿವ ರಾಜನಾಥ್ ಸಿಂಗ್ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ'ಇಂಡಿಯಾ ಮೈತ್ರಿಕೂಟದ ಭವಿಷ್ಯ ಉಜ್ವಲವಾಗಿಲ್ಲ'- ಪಿ ಚಿದಂಬರಂರಸ್ತೆಗೆ ಬಿದ್ದ ಯುವತಿಯ ಮೇಲೆ ಹರಿದ ಕಾರು; ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು