ಇಂದು ನಾಡಹಬ್ಬ ಮೈಸೂರು ದಸರ ಜಂಬೂಸವಾರಿ.!
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ'ಯು ವಿಜಯದಶಮಿಯ ದಿನವಾದ ಶನಿವಾರ (ಅ.12) ನಡೆಯಲಿದ್ದು, ರಾಜಪಥ'ದಲ್ಲಿ ಸಾಗಲಿರುವ 'ಪರಂಪರೆಯ ತೇರು' ವೀಕ್ಷಿಸಲು ಸಾವಿರಾರು ಮಂದಿ ಭಾಗವಹಿಸಲಿದ್ದಾರೆ.
ಶನಿವಾರ ಮಧ್ಯಾಹ್ನ 1.41ರಿಂದ 2.10ರವರೆಗೆ ಅರಮನೆ ಬಲರಾಮ ದ್ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿ ಚಾಲನೆ ನೀಡುವರು. ಸಂಜೆ 4ರಿಂದ 4.30ರವರೆಗೆ ಅರಮನೆ ಆವರಣದಲ್ಲಿ 'ಅಭಿಮನ್ಯು' ಹೊರಲಿರುವ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಗೊಂಡ ಚಾಮುಂಡೇಶ್ವರಿ ದೇವಿ ಮೂರ್ತಿ ಹೊರಡಲಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.