LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಳಿ ವಯಸ್ಸಿನಲ್ಲಿ 9ನೇ ತರಗತಿಗೆ ದಾಖಲಾದ ಕಾವಲುಗಾರ - 78ನೇ ವಯಸ್ಸಿನ ವೃದ್ಧನ ಕಥೆ ಎಲ್ಲರಿಗೂ ಸ್ಪೂರ್ತಿ

ಮಿಜೋರಾಂ : ಕಲಿಕೆ ನಿರಂತರವಾಗಿರಬೇಕು. ಅದಕ್ಕೆ ಯಾವುದೇ ಜಾತಿ ಧರ್ಮ ಭೇದ ಭಾವ ಹಾಗೂ ವಯಸ್ಸಿನ ಎಂಬುದು ಇಲ್ಲವೇ ಇಲ್ಲ. ಮನಸ್ಸು ಮಾತ್ರ ಮುಖ್ಯ. ಮನಸ್ಸಿದ್ದರೆ ಎಂತಹ ವಯಸ್ಸಿನಲ್ಲಿಯಾದರೂ ನಾವು ಏನನದ್ದಾರೂ ಕಲಿತು ಸಾಧನೆ ಮಾಡಬಹುದು. ರಾತ್ರಿ ಶಾಲೆ ಕಲಿತು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು ಕೇಳಿದ್ದೇವೆ. ಅದೇ ರೀತಿ ಇಲ್ಲೊಬ್ಬರು 78 ನೇ ವಯಸ್ಸಿನಲ್ಲಿ ಕಲಿಕೆ ಆರಂಭಿಸಿದ್ದಾರೆ. ಅದೂ ಕೂಡಾ ಒಂಬತ್ತನೇ ತರಗತಿಯಲ್ಲಿ ಕಲಿಯುತ್ತಿರುವುದು ವಿಶೇಷವಾಗಿದೆ. ಮಿಜೋರಾಂನ ಚಂಫೈ ಜಿಲ್ಲೆಯ ಹ್ರೂಯಿಕಾನ್ ಗ್ರಾಮದ ಲಾಲ್ರಿಂಗ್ಥರಾ ಅವರ ಕಥೆ ಈಗ ಅನೇಕರಿಗೆ ಸ್ಫೂರ್ತಿಯಾಗಿದೆ.

ಅವರು ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹ್ರುಯಿಕಾವ್ನ್ ಗ್ರಾಮದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ (ಆರ್‌ಎಂಎಸ್‌ಎ) ಪ್ರೌಢಶಾಲೆಯಲ್ಲಿ 9 ನೇ ತರಗತಿಗೆ ದಾಖಲಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಂಡೋ-ಮ್ಯಾನ್ಮಾರ್ ಗಡಿಯ ಸಮೀಪದಲ್ಲಿರುವ ಖುವಾಂಗ್ಲೆಂಗ್ ಗ್ರಾಮದಲ್ಲಿ 1945 ರಲ್ಲಿ ಜನಿಸಿದ ಶ್ರೀ ಲಾಲ್ರಿಂಗ್ಥರಾ ತಮ್ಮ ತಂದೆ ಮರಣ ಹೊಂದಿದ ಕಾರಣ 2 ನೇ ತರಗತಿಯ ನಂತರ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಮನೆಯ ಆರ್ಥಿಕ ಪರಿಸ್ಥಿತಿ ಸರಿಯಿರದ ಕಾರಣ ಅಲ್ಲದೇ ತಂದೆಗೆ ಒಬ್ಬನೇ ಮಗನಾಗಿದ್ದ ಲಾಲ್ರಿಂಗ್ಥರಾ ಮನೆಯ ಜವಾಬ್ದಾರಿಯನ್ನು ಚಿಕ್ಕ ವಯಸ್ಸಿನಲ್ಲೇ ಹೊರಬೇಕಾಯಿತು. ಮನೆಯ ಆರ್ಥಿಕ ಪರಿಸ್ಥಿತಿಯೂ ಸರಿ ಇಲ್ಲದ ಕಾರಣ ಓದಿಗೆ ಹಿನ್ನಡೆಯಾಗಿತ್ತು. ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುತ್ತಿದ್ದ ಕುಟುಂಬ ಅಂತಿಮವಾಗಿ 1995 ರಲ್ಲಿ ನ್ಯೂ ಹ್ರೂಯಿಕಾನ್ ಗ್ರಾಮವೊಂದರಲ್ಲಿ ನೆಲೆ ನಿಂತರು ಈ ವೇಳೆ ಜೀವನ ಸಾಗಿಸಲು ಅಲ್ಲೇ ಇರುವ ಚರ್ಚ್ ಒಂದರಲ್ಲಿ ಕಾವಲುಗಾರನಾಗಿ ಕಾರ್ಯ ನಿರ್ವಹಿಸಲು ಆರಂಭಿಸಿದರು. ಇದರಿಂದ ಜೀವನ ನಡೆಸಲು ಒಂದು ಆಧಾರ ಸಿಕ್ಕಿದಂತಾಯಿತು. ಹೀಗೆ ಕೆಲಸ ಮಾಡುತ್ತಲೇ ತನಗೆ ಇಂಗ್ಲಿಷ್ ಬಗ್ಗೆ ಹೆಚ್ಚಿನ ಜ್ಞಾನ ಪಡೆಯಬೇಕು, ಟಿವಿಯಲ್ಲಿ ಬರುವ ಇಂಗ್ಲಿಷ್ ನ್ಯೂಸ್ ಅರ್ಥ ಮಾಡಿಕೊಳ್ಳಬೇಕು ಹಾಗೂ ಕೆಲವು ಕಚೇರಿಗಳಲ್ಲಿ ಅರ್ಜಿ ತುಂಬಲು ಇಂಗ್ಲಿಷ್ ಅತಿ ಅಗತ್ಯವಾಗಿತ್ತು. ಹಾಗಾಗಿ ಇಂಗ್ಲಿಷ್ ಬಗ್ಗೆ ಜ್ಞಾನ ಪಡೆಯಲೆಂದು ಮತ್ತೆ ತನ್ನ 78ನೇ ವಯಸ್ಸಿನಲ್ಲಿ 9 ನೇ ತರಗತಿಗೆ ದಾಖಲಾತಿಯನ್ನು ಪಡೆದುಕೊಳ್ಳಲು ಶಾಲೆಗೆ ತೆರಳಿ ಅಲ್ಲಿ ಮುಖ್ಯೋಪಾಧ್ಯಾಯರಲ್ಲಿ ಮಾತುಕತೆ ನಡೆಸಿ ಬಳಿಕ ತರಗತಿಗೆ ಸೇರ್ಪಡೆಗೊಂಡಿದ್ದಾರೆ. ಶಾಲೆಯಿಂದ ಮನೆಗೆ ಸುಮಾರು ಮೂರು ಕಿಲೋಮೀಟರ್ ದೂರವಿದ್ದ ಕಾರಣ ದಿನಾ ಬೆಳಿಗ್ಗೆ ಸಮವಸ್ತ್ರ ಧರಿಸಿ, ಬೆನ್ನಿಗೆ ಬ್ಯಾಗ್ ಹೇರಿಕೊಂಡು ಶಾಲೆವರೆಗೂ ನಡೆದುಕೊಂಡೇ ಬಂದು ಮಕ್ಕಳೊಂದಿಗೆ ತರಗತಿಯಲ್ಲಿ ಕುಳಿತು ಪಾಠ ಕೇಳಿ ಮತ್ತೆ ಸಂಜೆ ಮನೆಗೆ ನಡೆದುಕೊಂಡು ಬಂದು ಬಳಿಕ ರಾತ್ರಿ ಮೊದಲು ಕೆಲಸ ಮಾಡುತ್ತಿದ್ದ ಚರ್ಚ್ ನಲ್ಲೆ ಕೆಲಸ ನಿರ್ವಹಿಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆ