LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಇಸ್ರೇಲ್ ಕೆಣಕಿದ ಹಿಜ್ಬುಲ್ಲಾ ಉಗ್ರರಿಗೆ ತಕ್ಕ ಉತ್ತರ ನೀಡಿದ ಇಸ್ರೇಲ್ ಸೇನೆ – ವೈಮಾನಿಕ ದಾಳಿ ಸಾವಿನ ಸಂಖ್ಯೆ 492ಕ್ಕೆ ಏರಿಕೆ

ಲೆಬನಾನ್ : ಗಾಜಾದ ಹಮಾಸ್ ಉಗ್ರರಿಗೆ ಸಪೋರ್ಟ್ ಆಗಿ ನಿಂತು ಇಸ್ರೇಲ್ ಮೇಲೆ ದಾಳಿ ನಡೆಸಿದ ಹಮಾಸ್ ಉಗ್ರರಿಗೆ ಇದೀಗ ಇಸ್ರೇಲ್ ತಕ್ಕ ಉತ್ತರ ನೀಡಿದ್ದು, ಇಸ್ರೇಲ್ ವಾಯು ಸೇನೆಯ ವೈಮಾನಿಕ ದಾಳಿಗೆ  ಮೃತಪಟ್ಟವರ ಸಂಖ್ಯೆ 492ಕ್ಕೆ ಏರಿಕೆಯಾಗಿದೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ತಿಳಿಸಿದೆ.

ಮೃತರಲ್ಲಿ 35 ಮಕ್ಕಳು ಮತ್ತು 58 ಮಹಿಳೆಯರೂ ಸೇರಿದ್ದಾರೆ. ಇಸ್ರೇಲ್‌ ಸೇನೆಯ ದಾಳಿಗೆ ಕಳೆದ ಒಂದು ವಾರದಲ್ಲಿ 1,645 ಮಂದಿ ಗಾಯಗೊಂಡಿದ್ದಾರೆ’ ಎಂದು ಆರೋಗ್ಯ ಸಚಿವ ಫಿರಾಸ್ ಅಬಿಯದ್‌ ಹೇಳಿದ್ದಾರೆ.
ಹಮಾಸ್ ಉಗ್ರರ ವಿರುದ್ದಇಸ್ರೇಲ್ ನಡೆಸುತ್ತಿರುವ ಯುದ್ದದ ಸಂದರ್ಭ ಹಮಾಸ್ ಉಗ್ರರಿಗೆ ಹಿಜ್ಬುಲ್ಲಾ ಬೆಂಬಲ ನೀಡಿತ್ತು, ಆದರೂ ಇಸ್ರೇಲ್ ಲೆಬನಾನ್ ಮೇಲೆ ದಾಳಿಗೆ ಮುಂದಾಗಿರಲಿಲ್ಲ. ಇತ್ತೀಚೆಗೆ ಹಿಜ್ಬುಲ್ಲಾ ಕಮಾಂಡರ್ ಗಳ ಹತ್ಯೆ ಬಳಿಕ ಹಿಜ್ಬುಲ್ಲಾ ಇಸ್ರೇಲ್ ಮೇಲೆ ದಾಳಿ ಆರಂಭಿಸಿತ್ತು, ಇಸ್ರೇಲ್ ಮತ್ತು ಲೆಬನಾನ್ ನಡುವೆ ಕೇವಲ ಮಿಲಿಟಿರಿ ನೆಲೆಗಳ ಮೇಲೆ ಮಾತ್ರ ದಾಳಿಗೆ ಒಪ್ಪಂದ ಇತ್ತು, ಆದರೆ ಹಿಜ್ಬುಲ್ಲಾ ಉಗ್ರರು ಅದನ್ನು ಮೀರಿ ಇಸ್ರೇಲ್ ನಲ್ಲಿ ಜನವಸತಿ ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದರು. ಇದು ಇಸ್ರೇಲ್ ನ್ನು ಕೆರಳಿಸಿದ್ದು, ಇದೀಗ ಇಸ್ರೇಲ್‌–ಹಮಾಸ್‌ ಯುದ್ಧ ಆರಂಭವಾದ ಬಳಿಕ, ಇಸ್ರೇಲ್‌ ಸೇನೆ ಹಿಜ್ಬುಲ್ಲಾ ಬಂಡುಕೋರರನ್ನು ಗುರಿಯಾಗಿಸಿ ಇಷ್ಟೊಂದು ದೊಡ್ಡ ಮಟ್ಟದಲ್ಲಿ ವೈಮಾನಿಕ ದಾಳಿ ನಡೆಸಿದ್ದು ಇದೇ ಮೊದಲು. ದಾಳಿಯಲ್ಲಿ ಹಮಾಸ್‌ನ ಕಮಾಂಡರ್ ಮಹಮೂದ್ ಅಲ್ ನಾದರ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸೋಮವಾರದ ದಾಳಿಯೂ ಸೇರಿದಂತೆ ಹಿಜ್ಬುಲ್ಲಾ ಬಂಡುಕೋರರ 300ಕ್ಕೂ ಹೆಚ್ಚು ತಾಣಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್‌ ಹೇಳಿದೆ. ‘ಶತ್ರುವಿನ ದಾಳಿಗೆ ಪ್ರತ್ಯುತ್ತರವಾಗಿ ಹೈಫಾದಲ್ಲಿರುವ ಸೇನಾ ನೆಲೆಗಳನ್ನು ಗುರಿಯಾಗಿಸಿ ರಾಕೆಟ್‌ ದಾಳಿ ನಡೆಸಿದ್ದೇವೆ’ ಎಂದು ಹಿಜ್ಬುಲ್ಲಾ ಪ್ರಕಟಣೆ ತಿಳಿಸಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್