LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ವ್ಯಕ್ತಿ 15 ಮದುವೆ ಆಗಿದ್ದು ಕೇಳಿದ್ರೆ ನೀವೆ ಶಾಕ್ ಆಗ್ತೀರ.!

 

ಮೈಸೂರು: ಮ್ಯಾಟ್ರಿಮೊನಿಯಲ್ ವೆಬ್ ಸೈಟ್ಗಳ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಂಡು ಮದುವೆಯಾಗಿ ನಂತರ ಅವರ ಹಣ, ಒಡವೆ ಯೊಂದಿಗೆ ಪರಾರಿ ಯಾಗುತ್ತಿದ್ದ, ಬೆಂಗಳೂರಿನ ಕಾಳಿದಾಸ ನಗರದ ನಿವಾಸಿ ಕೆ.ಬಿ.ಮಹೇಶ್ (35) ಎಂಬಾತನನ್ನು ಇಲ್ಲಿನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಿವಾಹ ಸಂಬಂಧಿ ಜಾಲತಾಣ ಗಳಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಳ್ಳು ತ್ತಿದ್ದ ಆರೋಪಿಯು, ಮದುವೆಯಾಗದ ವಯಸ್ಸಾದ ಮಹಿಳೆಯರು, ವಿಧವೆಯರನ್ನು ಹುಡುಕುತ್ತಿದ್ದ. ಅವರಿಗೆ ತಾನು ಡಾಕ್ಟರ್, ಎಂಜಿನಿಯರ್, ಸಿವಿಲ್ ಗುತ್ತಿಗೆದಾರನೆಂದು ಪರಿಚಯಿಸಿ ಕೊಂಡು ಸಂಪರ್ಕ ಬೆಳೆಸುತ್ತಿದ್ದ. ನಂಬಿಸಿ ಮದುವೆ ಮಾಡಿಕೊಳ್ಳುತ್ತಿದ್ದ. ಬಾಡಿಗೆ ಮನೆಗಳಿಗೆ ಕರೆದೊಯ್ದು ಬಿಡುತ್ತಿದ್ದ. ಒಂದಿಷ್ಟು ದಿನ ಜೊತೆಗಿದ್ದು, ಅವರ ಹಣ, ಒಡವೆಯೊಂದಿಗೆ ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಬಳಿಕ, ತಾನು ವಿಜಯನಗರದಲ್ಲಿ ಕ್ಲಿನಿಕ್ ತೆರೆಯುತ್ತಿದ್ದು, ₹70 ಲಕ್ಷ ಸಾಲ ತೆಗೆದುಕೊಡುವಂತೆ ಪತ್ನಿಯನ್ನು ಪೀಡಿಸಿದ್ದ. ಒಪ್ಪದಿದ್ದಾಗ ಕೊಲೆ ಬೆದರಿಕೆಯೊಡ್ಡಿದ್ದ. ಫೆ.5ರಂದು ಮನೆಯಲ್ಲಿದ್ದ ₹15 ಲಕ್ಷ ನಗದು ಹಾಗೂ 200 ಗ್ರಾಂನಷ್ಟು ಒಡವೆಗಳೊಂದಿಗೆ ಪರಾರಿಯಾಗಿದ್ದ. ನಂತರ, ದಿವ್ಯ ಎಂಬ ಮಹಿಳೆ ಮನೆಗೆ ಬಂದು, ಮಹೇಶ್ ತನ್ನನ್ನೂ ಮದುವೆಯಾಗಿರುವುದಾಗಿ ಹೇಳಿದ್ದರು. ಮೋಸ ಹೋಗಿರುವುದನ್ನು ಅರಿತು ಹೇಮಲತಾ ಕುವೆಂಪುನಗರ ಠಾಣೆಗೆ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 420, 406, 506 ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತುಮಕೂರಿನ ಮಹರ್ಷಿ ವಾಲ್ಮೀಕಿ ಸರ್ಕಲ್ ಬಳಿ ಶುಕ್ರವಾರ ಬಂಧಿಸಿದರು.

ಆರೋಪಿಯಿಂದ ಎರಡು ಕಾರು, 7 ಮೊಬೈಲ್ ಫೋನ್ ಹಾಗೂ ₹2 ಲಕ್ಷ ನಗದನ್ನು ವಶಕ್ಕೆ ಪಡೆದಿದ್ದಾರೆ. 15ಕ್ಕೂ ಹೆಚ್ಚು ಮಹಿಳೆಯರನ್ನು ವಂಚಿಸಿದ್ದಾಗಿ ಆರೋಪಿಯು ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ಹಾಗಾಗಿ ಇಂತವರನ್ನು ಕಂಡು ಮೋಸ ಹೋಗಬಾರದು ಹುಷಾರ್ ಆಗುರ ಬೇಕು ಅಷ್ಟೆ.!

 

ಡಿಸಿಪಿ ಮುತ್ತುರಾಜು, ಎಸಿಪಿ ಗಂಗಾಧರಸ್ವಾಮಿ ಮಾರ್ಗದರ್ಶನದಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಎಲ್.ಅರುಣ್, ಸಬ್ ಇನ್ಸ್ಪೆಕ್ಟರ್ಗಳಾದ ಎಂ.ರಾಧಾ, ಎಸ್.ಪಿ. ಗೋಪಾಲ್, ನಂಜುಂಡಸ್ವಾಮಿ ಅವರ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆ