LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ: ಪವಿತ್ರಾ ಗೌಡಗೆ ನರಕವಾಯ್ತು ಜೈಲು

ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪವಿತ್ರಾ ಗೌಡ ಜೈಲು ಸೇರಿದ್ದು, ಅಲ್ಲಿನ ವಾತಾವರಣ ಅವರಿಗೆ ಕಷ್ಟವಾಗುತ್ತಿದೆ. ಹೆಚ್ಚು ಉಪ್ಪು, ಖಾರ ಇಲ್ಲದ ಜೈಲಿನ ಆಹಾರ ಸೇವಿಸುವುದು ಪವಿತ್ರಾ ಗೌಡಗೆ ಕಷ್ಟ ಆಗಿದೆ. ಚಾಪೆಯಲ್ಲಿ ಮಲಗುವುದು ಅವರಿಗೆ ಸಾಧ್ಯವಾಗುತ್ತಿಲ್ಲ. ಸೊಳ್ಳೆ ಕಾಟ ಸಹ ಇರುವುದರಿಂದ ಪವಿತ್ರಾ ಗೌಡ ಮತ್ತಷ್ಟು ಹೈರಾಣಾಗಿದ್ದಾರೆ.

ಸಖತ್​ ಹೈಫೈ ಜೀವನ ನಡೆಸುತ್ತಿದ್ದ ನಟಿ ಪವಿತ್ರಾ ಗೌಡ (Pavithra Gowda) ಅವರು ಈಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಕೊಲೆ ಕೇಸ್​ನಲ್ಲಿ ಅವರು ಪ್ರಮುಖ ಆರೋಪಿ ಆಗಿದ್ದು, ಪರಪ್ಪನ ಅಗ್ರಹಾರದಲ್ಲಿ (Parappana Agrahara) ಜೈಲು ವಾಸ ಅನುಭವಿಸುತ್ತಿದ್ದಾರೆ. ಇಷ್ಟು ದಿನ ದರ್ಶನ್​ ಸ್ನೇಹಿತೆಯಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಪವಿತ್ರಾ ಗೌಡಗೆ ಜೈಲಿನ ವಾತಾವರಣ ನರಕದಂತೆ ಆಗಿದೆ. ಸರಿಯಾಗಿ ಊಟ ಸೇರದೇ, ನಿದ್ರೆ ಬಾರದೇ ಅವರು ಒದ್ದಾಡುತ್ತಿದ್ದಾರೆ. ಮಂಕಾಗಿ ಕುಳಿತು ಕಣ್ಣೀರು ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆಗಿರುವ ದರ್ಶನ್​ (Darshan) ಕೂಡ ಈಗ ಜೈಲಿನಲ್ಲಿದ್ದಾರೆ.

ಅಶ್ಲೀಲ ಸಂದೇಶ ಕಳಿಸಿದ ಎಂಬ ಕಾರಣಕ್ಕೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಣ ಮಾಡಿಕೊಂಡು ಬಂದು, ಪಟ್ಟಣಗೆರೆ ಶೆಡ್​ನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್​, ಪವಿತ್ರಾ ಗೌಡ ಹಾಗೂ ಸಹಚರರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೊರಗಡೆ ಇದ್ದಾಗ ಐಷಾರಾಮಿ ಜೀವನ ನಡೆಸುತ್ತಿದ್ದ ಅವರಿಗೆ ಜೈಲಿನಲ್ಲಿ ದಿನ ಕಳೆಯುವುದು ಕಷ್ಟವಾಗಿದೆ.

 

ಸಹಕೈದಿಗಳ ಜೊತೆ ಪವಿತ್ರಾ ಗೌಡ ಬೆರೆಯುತ್ತಿಲ್ಲ. ಅಲ್ಲದೇ ಅವರು ಸಂಪೂರ್ಣ ಮೌನಕ್ಕೆ ಶರಣಾಗಿದ್ದಾರೆ. ಇಂದು (ಜೂನ್​ 24) ಬೆಳಗ್ಗೆ ಬೇಗ ಎದ್ದ ಅವರು ಕಾಫಿ ಕುಡಿದು, ಪೇಪರ್ ಓದಿದ್ದಾರೆ. ನಿನ್ನೆ ರಾತ್ರಿ ಜೈಲಿನ ಸಿಬ್ಬಂದಿ ನೀಡಿದ್ದ ಮುದ್ದೆ, ಅನ್ನ, ಚಪಾತಿ ತರಕಾರಿ ಸಾಂಬಾರ್ ಮತ್ತು ಮಜ್ಜಿಗೆ ಊಟವನ್ನು ಅವರು ಒಲ್ಲದ ಮನಸ್ಸಿನಿಂದ ಸೇವಿಸಿದ್ದಾರೆ ಎನ್ನಲಾಗಿದೆ.

ಸರಿಯಾಗಿ ಉಪ್ಪು ಖಾರ ಇಲ್ಲದ ಜೈಲಿನ ಊಟ ಸೇವಿಸುವುದು ಪವಿತ್ರಾ ಗೌಡ ಅವರಿಗೆ ಸಖತ್​ ಕಷ್ಟ ಆಗಿದೆ. ಅಷ್ಟೇ ಅಲ್ಲದೇ, ಚಾಪೆಯಲ್ಲಿ ಮಲಗಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದರ ಜೊತೆಗೆ ಸೊಳ್ಳೆ ಕಾಟ ಕೂಡ ಇರುವುದರಿಂದ ಅವರು ಇನ್ನಷ್ಟು ಹೈರಾಣಾಗಿದ್ದಾರೆ. ರಾತ್ರಿ ಬೇಗ ಮಲಗಿದರೂ ಕೂಡ ಅವರು ಪದೇ ಪದೇ ಎಚ್ಚರಕೊಳ್ಳುತ್ತಿದ್ದರು ಎಂಬ ಮಾಹಿತಿ ಸಿಕ್ಕಿರುವುದಾಗಿ ವಾಹಿನಿ ವರದಿ ಮಾಡಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ ದೇಶಾದ್ಯಂತ ಸುದ್ದಿ ಆಗಿದೆ. ಸ್ಟಾರ್​ ನಟ ದರ್ಶನ್​ ಮೇಲೆ ಕೊಲೆ ಆರೋಪ ಬಂದಿರುವುದರಿಂದ ಎಲ್ಲರ ಕಣ್ಣು ಈ ಕೇಸ್​ನ ಮೇಲಿದೆ. ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಕೂಡ ಒತ್ತಾಯಿಸಿದ್ದಾರೆ. ದರ್ಶನ್​ ಮೇಲೆ ಗಂಭೀರ ಆರೋಪ ಎದುರಾದ ಕಾರಣ ಅವರ ಆಪ್ತರಿಗೆ ಬೇಸರ ಆಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು: ಸಿಎಂ ನಿವಾಸದಲ್ಲಿ ಬಜೆಟ್ ಬಗ್ಗೆ ಚರ್ಚೆಬೆಂಗಳೂರಿನಲ್ಲಿ ಸುಗಮ ಸಂಚಾರಕ್ಕೆ BDA ಮಾಸ್ಟರ್ ಪ್ಲಾನ್ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನ ಹಲವು ಸ್ಪಷ್ಟನೆ ಕೇಳಿ ತಿರಸ್ಕರಿಸಿದ ರಾಜ್ಯಪಾಲರುಕುಂಭಮೇಳದಲ್ಲಿ ಸನಾತನ ಧರ್ಮ ಸ್ವೀಕರಿಸಿದ 200 ಮಂದಿ ವಿದೇಶಿಗರುಕೇಂದ್ರ ಸರ್ಕಾರದಿಂದ ರೈತರ ಖಾತೆಗೆ 10,000 ರೂ. ಜಮೆಪಡಿತರ ಚೀಟಿ ಫಲಾನುಭವಿಗಳಿಗೆ ಬಿಗ್‌ ಶಾಕ್‌..!! ಇನ್ಮುಂದೆ ಇವರಿಗೆ ಉಚಿತ ರೇಷನ್‌ ಸಿಗಲ್ಲ..!10 ಲಕ್ಷ ಲಂಚಕ್ಕೆ ಬೇಡಿಕೆ : ಗ್ರಾಪಂ‌ಅಧ್ಯಕ್ಷೆ ಪತಿ,ಉಪಾಧ್ಯಕ್ಷ ಲೋಕಾಯುಕ್ತ ಬಲೆಗೆಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ; ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ