LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಉಪ ಲೋಕಾಯುಕ್ತರಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇಮಕ

ಬೆಂಗಳೂರು : ದಕ್ಷ, ನಿಷ್ಪಕ್ಷಪಾತ ಹಾಗೂ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರನ್ನು ಉಪ ಲೋಕಾಯುಕ್ತರಾಗಿ ನೇಮಕ ಮಾಡಲಾಗಿದೆ. ಬಿ. ವೀರಪ್ಪ ಅವರನ್ನು ಉಪಲೋಕಾಯುಕ್ತರಾಗಿ ಆಯ್ಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ನ್ಯಾ. ವೀರಪ್ಪ ಅವರು, ರಾಜ್ಯದಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಪಡಿಸಿ, ಭ್ರಷ್ಟಾಚಾರ ತಡೆ ಕಾಯ್ದೆಯ ಅಧಿಕಾರವನ್ನು ಮತ್ತೆ ಲೋಕಾಯುಕ್ತಕ್ಕೆ ನೀಡಿದ್ದ ಹೈಕೋರ್ಟ್ ಪೀಠದ ನೇತೃತ್ವ ವಹಿಸಿದ್ದರು. ಅಷ್ಟೇ ಅಲ್ಲದೆ, ಪಿಎಸ್‌ಐ ನೇಮಕಾತಿ ಹಗರಣದ ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅವರು ತನಿಖೆ ನಡೆಸಿ ವರದಿ ಸಲ್ಲಿಸಿದ್ದರು. ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಆದಾಯ ತಂದ ಸಂಚಾರಿ ನಿಯಮ ಉಲ್ಲಂಘನೆ ದಂಡದ ಮೇಲೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ರಾಜ್ಯ ಸರ್ಕಾರ ಕ್ರಮದಲ್ಲಿ ನ್ಯಾಯಮೂರ್ತಿ ವೀರಪ್ಪ ಅವರ ಪಾತ್ರ ಪ್ರಮುಖವಾಗಿತ್ತು. ಅವರು ತಮ್ಮ ಅಧಿಕಾರಾವಧಿಯಲ್ಲಿ ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನ ನಾಗದೇನಹಳ್ಳಿ ಗ್ರಾಮದ ನ್ಯಾಯಮೂರ್ತಿ ವೀರಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಅಧ್ಯಕ್ಷರಾಗಿ ಅತಿ ಹೆಚ್ಚು ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ದಾಖಲೆ ನಿರ್ಮಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST