ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.
ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಗಾಯಗೊಂಡವರು.
https://bcsuddi.com/%e0%b2%b9%e0%b3%8a%e0%b2%b8-%e0%b2%b5%e0%b2%bf%e0%b2%a8%e0%b3%8d%e0%b2%af%e0%b2%be%e0%b2%b8%e0%b2%a6%e0%b3%8a%e0%b2%82%e0%b2%a6%e0%b2%bf%e0%b2%97%e0%b3%86-%e0%b2%ac%e0%b2%bf%e0%b2%a1%e0%b3%81%e0%b2%97/
ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ನಸುಕಿನ 3.30 ರ ಸುಮಾರಿಗೆ ಜಾನುವಾರುಗಳಿಗೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಪರಿಣಾಮ ರಸ್ತೆ ಬದಿಯಲ್ಲಿ ಮಲಗಿದ್ದ ಮೂರು ಜಾನುವಾರುಗಳು ಸಾವನ್ನಪ್ಪಿವೆ, ಕಾರಲ್ಲಿದ್ದ ವೈದ್ಯ ವಿದ್ಯಾರ್ಥಿ ಕೈ ಮೂಳೆ ಮುರಿತಕ್ಕೊಳಗಾಗಿದೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.