LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ: HDK ಕಿಡಿ

ಬೆಂಗಳೂರು: ಲೋಕಾಯುಕ್ತ ADGP ಚಂದ್ರಶೇಖರ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮತ್ತೆ ಕಿಡಿ ಕಾರಿದ್ದಾರೆ. ಕಳಂಕಿತ ಅಧಿಕಾರಿ ಕುಮಾರಸ್ವಾಮಿ ಅವರ ಸರ್ಕಾರದಲ್ಲಿಯೂ ಕೆಲಸ ಮಾಡಿರಲಿಲ್ಲವೆ? ಎಂದು ಕೇಳಿದ್ದ ಕೆಲ ಸಚಿವರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಹುದ್ದೆಯಲ್ಲಿರುವ ಕಳಂಕಿತ, ಕ್ರಿಮಿನಲ್ ಪ್ರವೃತ್ತಿಯ ಅಧಿಕಾರಿ ಕುಮಾರಸ್ವಾಮಿಯವರ ಅಧಿಕಾರಾವಧಿಯಲ್ಲಿಯೂ ಕೆಲಸ ಮಾಡಿರಲಿಲ್ಲವೇ? ಎನ್ನುವುದು ಈ ಸರಕಾರದಲ್ಲಿರುವ ಕೆಲವರ ಪ್ರಶ್ನೆ. ನನ್ನ ಸರಕಾರದಲ್ಲಿಯೂ ಈ ಅಧಿಕಾರಿ ಕೆಲಸ ಮಾಡಿದ್ದರು, ನಿಜ. ನಾನು ಇಲ್ಲವೆನ್ನುವುದಿಲ್ಲ. ಆದರೆ; ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ. ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ. ನಿಮಗೆ ಅಂತಹ ಎದೆಗಾರಿಕೆ ಇದೆಯಾ ಕಾಂಗ್ರೆಸ್ ಸಚಿವರೇ? ಎಂದು ಪ್ರಶ್ನಿಸಿದ್ದಾರೆ ಕೇಂದ್ರ ಸಚಿವರು. ಕಳಂಕಿತ ಅಧಿಕಾರಿಗಳಿಂದ ರಕ್ಷಣೆ ಪಡೆದುಕೊಳ್ಳುವ ನಿಮ್ಮ ನಿಕೃಷ್ಟ ಸ್ಥಿತಿ ನನಗೆ ಬಂದಿಲ್ಲ, ಬರುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ; ಆರೋಪಿ ಆಟೋ ಚಾಲಕ ಅರೆಸ್ಟ್'ರಾಜ್ಯ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ'- ಅಶೋಕ್ವಾಟೆಹೊಳೆ ಜಲಪಾತಕ್ಕೆ ಕಾಲುಜಾರಿ ಬಿದ್ದು ಇಬ್ಬರು ಯುವಕರು ಮೃತ್ಯುಈ ತಿಂಗಳ 24 ರಂದು ಪಿಎಂ ಕಿಸಾನ್‌ ಹಣ ರೈತರ ಖಾತೆಗೆ ವರ್ಗಾವಣೆ ಸಾಧ್ಯತೆ..!ಶನಿವಾರ ಭರ್ಜರಿ ಇಳಿಕೆ ಕಂಡ ಚಿನ್ನ: ಆಭರಣ ಪ್ರಿಯರು ಫುಲ್‌ ಖುಷ್‌ನಟ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ : ನಾಳೆ 'ಡೆವಿಲ್‌' ಚಿತ್ರದ ಟೀಸರ್‌ ರಿಲೀಸ್‌WPL 2025: RCBಗೆ ಭಾರಿ ಆಘಾತ; ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಸರಣಿಯಿಂದಲೇ ಔಟ್ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶAICC ಪುನರಾಚನೆ: ಮತ್ತೆ ರಾಷ್ಟ್ರರಾಜಕಾರಣಕ್ಕೆ ಬಿ.ಕೆ. ಹರಿಪ್ರಸಾದ್