LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಕೆ 47 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಸಫಿ ಆಖ್ತಾರ್ ಆತ್ಮಹತ್ಯೆ….!

ಬಿಜಾಪುರ (ಛತ್ತೀಸ್​ಗಢ): ಕೇಂದ್ರೀಯ ಮೀಸಲು ಪೊಲೀಸ್​ ಪಡೆಯ (ಸಿಆರ್​ಪಿಎಫ್​) ಪ್ರಮುಖ ಘಟಕವಾದ ಕಮಾಂಡೋ ಬೆಟಾಲಿಯನ್​ ಫಾರ್​ ರೆಸಲ್ಯೂಟ್ ಆಕ್ಷನ್​ (ಕೋಬ್ರಾ) ಇನ್ಸ್​ಪೆಕ್ಟರ್​ವೊಬ್ಬರು ತಮ್ಮ ಸರ್ವೀಸ್​ ಎಕೆ 47 ರೈಫಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಛತ್ತೀಸ್​ಗಢದ ಬಿಜಾಪುರ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ನಡೆದಿದೆ.

ಕೋಬ್ರಾ 210ನೇ ಬೆಟಾಲಿಯನ್​ನ ಇನ್ಸ್​ಪೆಕ್ಟರ್​ ಸಫಿ ಆಖ್ತಾರ್​ ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ. ರಾಜಧಾನಿ ರಾಯಪುರದಿಂದ 400 ಕಿಮೀ ದೂರ ಇರುವ ಬಿಜಾಪುರದಲ್ಲಿರುವ ಸಿಆರ್​ಪಿಎಫ್​ನ 170ನೇ ಬೆಟಾಲಿಯನ್​ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನ ಸರ್ವೀಸ್​ ರೈಫಲ್​ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿದ ಸಹೋದ್ಯೋಗಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ಸ್​ಪೆಕ್ಟರ್ ​ಅನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಅಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿನ ಮೋಕೂರ್​ ಕ್ಯಾಂಪ್​ನಲ್ಲಿ ಕಮಾಂಡೋ ಆಖ್ತಾರ್​ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಆದರೆ, ಇತ್ತೀಚೆಗೆ ವಿಜಾಪುರಕ್ಕೆ ಆಗಮಿಸಿದ್ದರು. ಕೆಲ ದಿನಗಳಲ್ಲಿ ಅವರು ರಜೆ ಮೇಲೆ ದೆಹಲಿಗೆ ಹೋಗಬೇಕಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಯಾವುದೇ ಡೆತ್​ನೋಟ್​ ಸಹ ಪತ್ತೆಯಾಗಿಲ್ಲ. ಕೌಟುಂಬಿಕ ವಿಷಯವಾಗಿ ಸಾವಿಗೆ ಶರಣಾಗಿರಬಹುದು ಎಂಬ ಪ್ರಾಥಮಿಕ ಮಾಹಿತಿ ಇದೆ. ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಕೋಬ್ರಾ ಪಡೆಯು ಸಿಆರ್​ಪಿಎಫ್​ನ ಅಗ್ರ ಘಟಕ. ರಾಜ್ಯದ ನಕ್ಸಲ್‌ಪೀಡಿತ ಪ್ರದೇಶಗಳಾದ ಬಸ್ತಾರ್​ ವಿಭಾಗದ ದಂತೇವಾಡ ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಕೋಬ್ರಾ ಕಮಾಂಡೋಗಳನ್ನು ನಿಯೋಜಿಸಲಾಗಿರುತ್ತದೆ. ನಕ್ಸಲ್‌ವಿರೋಧಿ ಕಾರ್ಯಾಚರಣೆಯಲ್ಲಿ ಕೋಬ್ರಾ ಪಡೆ ಪ್ರಮುಖ ಪಾತ್ರವನ್ನು ವಹಿಸುತ್ತಿದೆ.

ಮಾವೋವಾದಿಗಳ ದಾಳಿ, ಇಬ್ಬರು ಯೋಧರು ಸಾವು ಪ್ರಕರಣ: ಜಾರ್ಖಂಡ್ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಆಗಸ್ಟ್​ 15ರಂದು ನಡೆದ ಮಾವೋವಾದಿಗಳ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಮೃತರನ್ನು ಜಾರ್ಖಂಡ್ ಜಾಗ್ವಾರ್ ಪಡೆಯ ಸಬ್‌ ಇನ್ಸ್​ಪೆಕ್ಟರ್ ಅಮಿತ್ ತಿವಾರಿ ಮತ್ತು ಕಾನ್​ಸ್ಟೇಬಲ್​ ಗೌತಮ್ ರಾಣಾ ಎಂದು ಗುರುತಿಸಲಾಗಿತ್ತು.

ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಸಿಆರ್‌ಪಿಎಫ್ ಕ್ಯಾಂಪ್‌ನಿಂದ ಟೆಂತೋ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬ್ಕಾ ಅರಣ್ಯದಲ್ಲಿರುವ ಜಾಗ್ವಾರ್ ಕ್ಯಾಂಪ್‌ಗೆ ಆಹಾರ ಪೂರೈಸುತ್ತಿದ್ದಾಗ ಯೋಧರ ಮೇಲೆ ಅಂದು ಮಧ್ಯರಾತ್ರಿ 12.30ಕ್ಕೆ ಮಾವೋವಾದಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಪೊಲೀಸ್​ ಪಡೆಗಳು ಕಾರ್ಯಾಚರಣೆ ಕೈಗೊಂಡು ಪ್ರತೀಕಾರದ ಗುಂಡಿನ ದಾಳಿ ನಡೆಸಿದ್ದರು. ಆದರೂ, ಮಾವೋವಾದಿಗಳು ಕತ್ತಲೆಯಲ್ಲಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈ ದಾಳಿಯನ್ನು ಮಿಸಿರ್ ಬೆಸ್ರಾ ಗುಂಪು ನಡೆಸಿತ್ತು ಎಂದು ವರದಿಯಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.