LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏಕನಾಥೇಶ್ವರಿ ಅಮ್ಮನವರ ಜಾತ್ರೆ ಬಗ್ಗೆ ಮಾಹಿತಿ ಇಲ್ಲಿದೆ.

 

ಚಿತ್ರದುರ್ಗ : ನಗರದ ಏಕನಾಥೇಶ್ವರಿ ಅಮ್ಮನವರ ಜಾತ್ರೆ ಏ.23 ರಿಂದ ಆರಂಭಗೊಂಡಿದ್ದು, ಮೇ.7 ರಂದು ಕಂಕಣ ವಿಸರ್ಜನೆ ಮತ್ತು ಗಂಗಾಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ.

27 ರಂದು ಕಂಕಣ ಧಾರಣೆ, ಭಂಡಾರ ಪೂಜೆ, ರುದ್ರಾಭಿಷೇಕ, ರಾತ್ರಿ ಎಂಟು ಗಂಟೆಯಿಂದ ರಾಜ ಬೀದಿಗಳಲ್ಲಿ ಸಿಂಹವಾಹಿನಿ ಉತ್ಸವ.

28 ರಂದು ರಾತ್ರಿ ಎಂಟು ಗಂಟೆಯಿಂದ ಸರ್ಪೋತ್ಸವದೊಂದಿಗೆ ಭಕ್ತರ ಮನೆಗಳಲ್ಲಿ ಪೂಜೆ.

29 ರಂದು ರಾತ್ರಿ 8 ಗಂಟೆಯಿಂದ ರಾಜ ಬೀದಿಗಳಲ್ಲಿ ಮಯೂರೋತ್ಸವ,

30 ರಂದು ರಾತ್ರಿ ಏಕನಾಥೇಶ್ವರಿ ಅಮ್ಮನಿಗೆ ಭಂಡಾರ ಪೂಜೆ.

ಮೇ.1 ರಂದು ಬೆಳಿಗ್ಗೆ 9 ಗಂಟೆಗೆ ಭಂಡಾರದ ಪೂಜೆ, ಏಕನಾಥೇಶ್ವರಿ ಅಮ್ಮನನ್ನು ಬೆಟ್ಟದಿಂದ ಕೆಳಗಿಳಿಸಲಾಗುವುದು. ಅರ್ಚಕರ ಮನೆಯಲ್ಲಿ ಮಕ್ಕಳಿಗೆ ಬೇವಿನ ಉಡುಗೆ ಸೇವಾ ಅಶ್ವೋತ್ಸವದಲ್ಲಿ ಕಾಮನಬಾವಿ ಹೊಂಡದಲ್ಲಿ ಗಂಗಾಪೂಜೆ. ನಂತರ ಜಿಲ್ಲಾಧಿಕಾರಿ ಬಂಗಲೆ ಹಾಗೂ ಕೆಳಗೋಟೆ ಭಕ್ತಾಧಿಗಳಿಂದ ಪೂಜೆ.

2 ರಂದು ಸಂಜೆ ಏಳಕ್ಕೆ ಕರುವಿನಕಟ್ಟೆ ಮತ್ತು ಪಾದಗಟ್ಟೆ, ವಿದ್ಯಾನಗರ, ಮೆದೇಹಳ್ಳಿ ಭಕ್ತಾಧಿಗಳಿಂದ ಪೂಜೆ.

3 ರಂದು ಬೆಳಿಗ್ಗೆ ಎಂಟು ಗಂಟೆಯಿಂದ ರಾಜ ಬೀದಿಗಳಲ್ಲಿ ಅಶ್ವೋತ್ಸವ ಮತ್ತು ಹೂವಿನ ಉತ್ಸವ, ಕರುವಿನಕಟ್ಟೆ ಮತ್ತು ಜೋಗಿಮಟ್ಟಿ ರಸ್ತೆಯ ಭಕ್ತಾಧಿಗಳಿಂದ ಮಹಾ ಮಂಗಳಾರತಿ.

4 ರಂದು ಸಂಜೆ 5-30 ಕ್ಕೆ ಜಾತ್ರಾ ಬಯಲಿನ ಪಾದಗಟ್ಟೆಯಲ್ಲಿ ಏಕನಾಥೇಶ್ವರಿ ಅಮ್ಮನವರ ಸಿಡಿ ಉತ್ಸವ. ಮಹಾಮಂಗಳಾರತಿ.

5 ರಂದು ಸಂಜೆ 6-30 ಕ್ಕೆ ಬೆಟ್ಟದ ಮೇಲೆ ಓಕಳಿ ಉತ್ಸವ.

ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಏಕನಾಥೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ ಮನವಿ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನಾಥ ಯುವತಿಗೆ ಧಾರೆಯೆರೆದ ಉಡುಪಿ ಜಿಲ್ಲಾಧಿಕಾರಿ..!ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,130 ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಬೆಳ್ಳಂ ಬೆಳಿಗ್ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಅಧಿಕಾರಿಗಳ ದಾಳಿಹಂಸರಾಜ್ ಭಾರದ್ವಾಜ್ ಮಾಡಿದ್ರೆ ತಪ್ಪಲ್ಲ, ದಲಿತ ರಾಜ್ಯಪಾಲ ಗೆಹ್ಲೋಟ್ ಮಾಡಿದ್ರೆ ತಪ್ಪಾ - ಸುನಿಲ್ ಕುಮಾರ್ ಪ್ರಶ್ನೆ ಎಲ್ಲಾ ಮಾದರಿಯ ಕ್ರಿಕೆಟ್ ಗೆ ಸ್ಟಾರ್‌ ಕ್ರಿಕೆಟಿಗ ಶಿಖರ್‌ಧವನ್‌ ನಿವೃತ್ತಿ ಘೋಷಣೆಮಂಗಳೂರಿನಲ್ಲಿ ಭಯಾನಕ ಗ್ಯಾಂಗ್ ರೇಪ್: ಅನ್ಯಕೋಮಿನ ಮೂವರು ಯುವಕರಿಂದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ..!ರುಚಿಕರವಾದ ಸೋರೆಕಾಯಿ ಪಾಯಸ ಮಾಡುವ ವಿಧಾನಕಿವಿ ಹಣ್ಣಿನ ವಿಶೇಷ ಗುಣಗಳು ನಮ್ಮ ಆರೋಗ್ಯಕ್ಕೆ ಹೇಗೆ ಸಹಾಯಕ ಗೊತ್ತೇ?ಮನೆಯಲ್ಲಿ ಪ್ರತಿಯೊಂದು ಸಣ್ಣ ಸಣ್ಣ ವಿಚಾರಕ್ಕೂ ಕೂಡ ಜಗಳ ಆಗುತ್ತಾ ಇದ್ದರೆ ಈ ರೀತಿಯ ಪರಿಹಾರ ಕ್ರಮವನ್ನ ಅನುಸರಿಸಿ.ಉಪ್ಪಾರ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ