LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಏಳು ಸಲ ಗರ್ಭಪಾತ ಮಾಡಿಸಿದ: ರಾಜಕಾರಣಿ ಸೀಮನ್ ವಿರುದ್ಧ ನಟಿ ಜಯಲಕ್ಷ್ಮಿ ಆರೋಪ

ಕನ್ನಡದ ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ, ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು ಸೀಮನ್ ಮದುವೆಯಾಗಿ ಏಳು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ಅವರು ದೂರಿನಲ್ಲಿ ಬರೆದಿದ್ದಾರೆ.

ತಿರುವಳ್ಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನೂ ನೀಡಿರುವ ನಟಿ ವಿಜಯಲಕ್ಷ್ಮಿ, ‘2000ರಲ್ಲಿ ತಾವು  ನಾಮ್‍ ತಮಿಳರ್ ಕಟ್ಚಿ (ಎನ್.ಟಿಕೆ) ನಾಯಕರೂ ಆಗಿರುವ ಸೀಮನ್ ಜೊತೆ ಮದುವೆಯಾಗಿದ್ದೇನೆ.  ಆನಂತರ ಅವರು ನನಗೆ ಮೋಸ ಮಾಡುತ್ತಲೇ ಹೋದರು. ನನ್ನ ಚಿನ್ನಾಭರಣ ದೋಚಿದರು. ಏಳು ಬಾರಿ ಗರ್ಭಪಾತ ಮಾಡಿಸಿದ್ದಾರೆ. ಅವರಿಂದ ನನಗೆ ಲೈಂಗಿಕ ದೌರ್ಜನ್ಯ ಕೂಡ ಆಗಿದೆ’ ಎಂದು ಹೇಳಿಕೆ ದಾಖಲಿಸಿದ್ದಾರೆ.

ಚೆನ್ನೈನ ಪೊಲೀಸ್ ಆಯುಕ್ತರ ಸಹಾಯ ಪಡೆದುಕೊಂಡು ದೂರು ದಾಖಲಿಸಿದ್ದ ವಿಜಯಲಕ್ಷ್ಮಿ ತಮಗೆ ನ್ಯಾಯ ದೊರಕಿಸಿ ಕೊಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ನಿನ್ನೆ ಕೂಡ ಫೇಸ್ ಬುಕ್ ಲೈವ್ ಗೆ ಬಂದು, ಈ ವಿಚಾರವನ್ನೂ ಮಾತನಾಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸ್ ಅಧಿಕಾರಿಗಳು ಸೀಮನ್ ಅವರಿಗೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಈ ಘಟನೆಯ ಕುರಿತು ವಿಜಯಲಕ್ಷ್ಮಿ ಪರ ಹೋರಾಟ ಮಾಡುತ್ತಿರುವ ತಮಿಳರ್ ಮುನ್ನೆಟ್ರ ಪಡೈಯ ಅಧ್ಯಕ್ಷೆ ವೀರಲಕ್ಷ್ಮಿ ಕೂಡ ಪ್ರತಿಕ್ರಿಯೆ ನೀಡಿದ್ದು, ಹಲವಾರು ವರ್ಷಗಳಿಂದ ಈ ಕುರಿತು ಹೋರಾಟ ಮಾಡುತ್ತಿದ್ದೇವೆ. ಅವರು ಪ್ರಭಾವಿ ರಾಜಕಾರಣಿ ಆಗಿರುವುದರಿಂದ ನ್ಯಾಯ ಸಿಗುತ್ತಿಲ್ಲ. ಈ ಬಾರಿ ನಮಗೆ ಶಿಕ್ಷೆ ಕೊಡಿಸುತ್ತೇವೆ ಎಂಬ ನಂಬಿಕೆ ಬಂದಿದೆ ಎಂದಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನುಉಡುಪಿ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಸಾವುಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಗೆ ಸೇರ್ಪಡೆ..!