LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಒಂದೇ ಮನೆ, 80 ಮತದಾರರು' ರಾಹುಲ್ ಆರೋಪದ ಅಸಲಿಯೇ? ಮನೆ ಮಾಲೀಕ ಹೇಳಿದೇನು??

ಬೆಂಗಳೂರು: ‘ಮಹದೇವಪುರ ಕ್ಷೇತ್ರದಲ್ಲಿ 1 ಬಿಎಚ್‌ಕೆ ಮನೆಯಲ್ಲಿ 80 ಮಂದಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ’ ಎಂಬ ರಾಹುಲ್‌ ಗಾಂಧಿ ಆರೋಪಕ್ಕೆ ಆ ಮನೆ ಮಾಲಿಕ ಜಯರಾಮ್‌ ರೆಡ್ಡಿ ಪ್ರತಿಕ್ರಿಯಿಸಿ, ತಿರುಗೇಟು ನೀಡಿದ್ದಾರೆ. ಸಾಮಾನ್ಯವಾಗಿ 6 ತಿಂಗಳಿಂದ 1 ವರ್ಷದವರೆಗೆ ವಾಸಿಸುವ ವಲಸೆ ಕಾರ್ಮಿಕರು ತಮ್ಮ ಮನೆಗೆ ಬಾಡಿಗೆಗೆ ಬರುತ್ತಾರೆ.

ಮನೆ ಮಾಲೀಕ ಹೇಳಿದೇನು?

ಮನೆ ಮಾಲೀಕ ಜಯರಾಮ್ ರೆಡ್ಡಿ ಸವಾಲು ಈ 35 ಮನೆಗಳ ಮಾಲೀಕರಾದ ಜಯರಾಮ್ ರೆಡ್ಡಿ ಅವರು ರಾಹುಲ್ ಗಾಂಧಿ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. "ನೋಡಿ, ಇವೆಲ್ಲ 10x15 ಅಳತೆಯ ಸಣ್ಣ ಮನೆಗಳು. ಇಲ್ಲಿರುವವರೆಲ್ಲರೂ ಕೂಲಿ ಮಾಡಿ ಜೀವಿಸುವ ಉತ್ತರ ಭಾರತದ ಬಡ ಕಾರ್ಮಿಕರು. ಇಂತಹ ಪುಟ್ಟ ಮನೆಯಲ್ಲಿ 80 ಮಂದಿ ಇರಲು ಸಾಧ್ಯವೇ? ಇದು ಶುದ್ಧ ಸುಳ್ಳು. ಇಲ್ಲಿಗೆ ಬಾಡಿಗೆಗೆ ಬರುವವರು ಮೂರು ತಿಂಗಳು, ಆರು ತಿಂಗಳು ಇದ್ದು, ಬೇರೆ ಕೆಲಸ ಸಿಕ್ಕಾಗ ಮನೆ ಖಾಲಿ ಮಾಡಿ ಹೋಗುತ್ತಾರೆ. ಆದರೆ, ಅವರು ತಮ್ಮ ವೋಟರ್ ಐಡಿಯಲ್ಲಿ ವಿಳಾಸ ಬದಲಾಯಿಸಿರುವುದಿಲ್ಲ. ಬಹುಶಃ ಹಾಗಾಗಿ ಹಳೆಯವರ ಹೆಸರುಗಳು ಪಟ್ಟಿಯಲ್ಲಿ ಉಳಿದಿರಬಹುದು. ಈ ಬಗ್ಗೆ ಯಾವುದೇ ತನಿಖೆ ನಡೆಸಿದರೂ ಎದುರಿಸಲು ನಾನು ಸಿದ್ಧ," ಎಂದು ಅವರು ಸವಾಲು ಹಾಕಿದ್ದಾರೆ.

ತಮ್ಮ ಹಾಗೂ ಬಿಜೆಪಿ ನಡುವಿನ ಸಂಪರ್ಕದ ಬಗ್ಗೆ ಗಾಂಧಿ  ಹೇಳಿಕೆಗೆ ಪ್ರತಿಕ್ರಿಯಿಸಿರುವ ಜಯರಾಮ್‌ ರೆಡ್ಡಿ, ನಾನು ಕಾಂಗ್ರೆಸ್‌ ಸದಸ್ಯನಾಗಿದ್ದೇನೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಬೆಂಬಲಿಸಿದ್ದೇನೆ. ಬಿಜೆಪಿಯೊಂದಿಗೆ ಯಾವುದೇ ರಾಜಕೀಯ ಸಂಬಂಧವಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026