LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಒಡಿಶಾ ಭೀಕರ ತ್ರಿವಳಿ ರೈಲು ದುರಂತದ ಹಿಂದಿನ ರಹಸ್ಯ ಬಯಲು - 293ಕ್ಕೂ ಹೆಚ್ಚು ಜನರ ಬಲಿಗೆ ಕಾರಣವಾಗಿದ್ದು ಏನು?

ನವದೆಹಲಿ : ಕಳೆದ ಜೂನ್‌ನಲ್ಲಿ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ʻಭೀಕರ ತ್ರಿವಳಿ ರೈಲು ಅಪಘಾತದ ಹಿಂದಿನ ರಹಸ್ಯ ಬಯಲಾಗಿದೆ. ರೈಲು ಸಚಿವಾಲಯ 293 ಕ್ಕೂ ಹೆಚ್ಚು ಪ್ರಯಾಣಿಕರ ಸಾವಿಗೆ ಕಾರಣವಾಗಿರುವ ಘಟನೆ ಕುರಿತು ಸಮಗ್ರ ವರದಿಯನ್ನು ಬಿಡುಗಡೆ ಮಾಡಿದೆ. ಹೌದು, ಒಡಿಶಾದ ಬಾಲಸೋರ್‌ನಲ್ಲಿ ನಡೆದ ಭೀಕರ ತ್ರಿವಳಿ ರೈಲು ದುರಂತಕ್ಕೆ 'ಸಿಗ್ನಲ್ ದೋಷ ಕಾರಣʼ ಎಂದು ರೈಲ್ವೇ ಸಚಿವಾಲಯ ಮೊದಲ ಬಾರಿಗೆ ರೈಲ್ವೆ ಸುರಕ್ಷತಾ ಆಯುಕ್ತರ ವರದಿಯನ್ನು ಬಿಡುಗಡೆ ಮಾಡಿದೆ. ಈ ಭೀಕರ ದುರಂತದಲ್ಲಿ 293 ಕ್ಕೂ ಹೆಚ್ಚು ಸಾವುಗಳು ಮತ್ತು 1,000 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿತ್ತು. ಅಪಘಾತ ಕಳೆದ ಎರಡು ದಶಕಗಳಲ್ಲಿ ಭಾರತದಲ್ಲಿ ಸಂಭವಿಸಿದ ಅತ್ಯಂತ ಭೀಕರ ರೈಲು ದುರಂತಗಳಲ್ಲಿ ಒಂದಾಗಿದೆ. ರಾಜ್ಯಸಭೆಯಲ್ಲಿ ಸಂಸದ ಡಾ ಜಾನ್ ಬ್ರಿಟ್ಟಾಸ್ ಕೇಳಿದ ಪ್ರಶ್ನೆಗಳಿಗೆ ಉತ್ತರವಾಗಿ ಬಹಿರಂಗಪಡಿಸಿದ ವರದಿಯು ಉತ್ತರ ಸಿಗ್ನಲ್ ಗೂಮ್ಟಿ ನಿಲ್ದಾಣದಲ್ಲಿ ಸಿಗ್ನಲಿಂಗ್ ಸರ್ಕ್ಯೂಟ್ ಬದಲಾವಣೆ ಮತ್ತು ಎಲೆಕ್ಟ್ರಿಕ್ ಲಿಫ್ಟಿಂಗ್ ಬ್ಯಾರಿಯರ್ ಅನ್ನು ಬದಲಾಯಿಸುವ ಸಿಗ್ನಲಿಂಗ್ ಕಾರ್ಯದ ಕಾರ್ಯಗತಗೊಳಿಸುವಿಕೆಯ ಸಮಯದಲ್ಲಿ ಲೋಪವಾಗಿದೆ. ಈ ದೋಷಗಳ ಪರಿಣಾಮವಾಗಿ ರಾಂಗ್ ಲೈನ್‌ಗೆ ಹಸಿರು ಸಿಗ್ನಲ್ ಪ್ರದರ್ಶಿಸಲಾಯಿತು. ಇದು ನಿಂತಿದ್ದ ಸರಕುಗಳ ರೈಲಿಗೆ ಡಿಕ್ಕಿಗೆ ಕಾರಣವಾಯಿತು ಎಂದು ವರದಿ ವಿವರಿಸಿದೆ. ಈ ಸಮಸ್ಯೆಗಳು ರೈಲ್ವೆ ಅಧಿಕಾರಿಗಳ ಕಡೆಯಿಂದ ನಿರ್ಲಕ್ಷ್ಯ ಲೋಪ ಎಂದು ಸಚಿವರು ಹೇಳಿದರು. ಇನ್ನು, ಅಪಘಾತದಲ್ಲಿ ಮೃತಪಟ್ಟ 41 ಪ್ರಯಾಣಿಕರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಸರ್ಕಾರ ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಡೆದ ಹಿಮ್ಮಡಿ ಪಾದ ಸರಿಪಡಿಸಲು ಇಲ್ಲಿದೆ ಮನೆಮದ್ದು...!'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿ