LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

"ಒಡಿಸ್ಸಾದಿಂದ ಬಂದಿರುವ ನಾಲ್ಕು ಜನರು ಸ್ಥಳೀಯ ಬ್ಯಾಟರಾಯನಪುರ ನಿವಾಸಿ ಸುರೇಶ್ ಎಂಬಾತನ ಸಹಾಯ ಪಡೆದು ರೂಮ್ ಬುಕ್ ಮಾಡಿಸಿದ್ದಾರೆ. ನಂತರ ನಮ್ಮ ಶಾಸಕರಿಗೆ ಆಮಿಷ ಒಡ್ಡಿದಾಗ ನಮ್ಮ ಪಕ್ಷದ ಎಂಎಲ್ ಎಗಳು ಈ ವಿಚಾರವನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ಆಮಿಷ ಒಡ್ಡಿದ ನಾಲ್ವರ ಪೈಕಿ ಇಬ್ಬರು ತಪ್ಪಿಸಿಕೊಂಡಿದ್ದು ಮತ್ತಿಬ್ಬರನ್ನು ಹಿಡಿಯಲಾಗಿದೆ. ಅವರು ಇದೇ ಕೆಲಸಕ್ಕೆ ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ. ಖಾಲಿ ಚೆಕ್ ತಂದಿದ್ದಾರೆ. ಆ ಮೂಲಕ ಆಪರೇಷನ್ ಕಮಲ ಮಾಡಲಾಗುತ್ತಿದೆ. ಎಐಸಿಸಿ ಕಾರ್ಯದರ್ಶಿಯವರು ಹಾಗೂ ಮಿಕ್ಕ ನಾಯಕರು ಇತರೇ ವಿಚಾರ ತಿಳಿಸಲಿದ್ದಾರೆ" ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡುವ ಬಗ್ಗೆ ಕೇಳಿದಾಗ, "ಪಕ್ಷದ ಎಂಎಲ್ ಎಗಳು ಪಕ್ಷದ ಅಧ್ಯಕ್ಷರನ್ನು ಭೇಟಿ ಮಾಡದೆ ಬಿಜೆಪಿ ಅಧ್ಯಕ್ಷರನ್ನು ಭೇಟಿ ಮಾಡಲು ಆಗುತ್ತದೆಯೇ?" ಎಂದರು‌.

ಕೇಂದ್ರ ಚುನಾವಣಾ ಆಯೋಗದ ಮಾಧ್ಯಮಗೋಷ್ಠಿಯಲ್ಲಿ ರಾಜ್ಯದ ಉಪಚುನಾವಣೆಯ ಬಗ್ಗೆ ಘೋಷಣೆ ಮಾಡಲಾಗುವುದೇ ಎಂದು ಕೇಳಿದಾಗ, "ಮಾಡಲಿ ಬಿಡಿ, ನಾವು ತಯಾರಾಗಿದ್ದೇವೆ. ನಮಗೆ ಯಾವುದೇ ಅನುಮಾನವಿಲ್ಲ, ಎಲ್ಲಾ ವರದಿ ತರಿಸಿಕೊಂಡಿದ್ದೇವೆ. ಎಲ್ಲಾ ನಾಯಕರ ಜೊತೆ ಚರ್ಚೆ ನಡೆಸಿದ್ದೇವೆ. ನಾವು ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ" ಎಂದರು.

ದಾವಣಗೆರೆ ಟಿಕೆಟ್ ಹಂಚಿಕೆ ಗೊಂದಲ ಬಗೆಹರಿದಿದೆಯೇ ಎಂದಾಗ, "ಎಲ್ಲಿದೆ ಗೊಂದಲ. ಯಾವ ಗೊಂದಲವೂ ಇಲ್ಲ. ಪಕ್ಷ ಏನು ಹೇಳುತ್ತದೆಯೋ ಅದನ್ನು ಒಪ್ಪಿಕೊಳ್ಳುವುದಾಗಿ ಎಲ್ಲಾ ನಾಯಕರು ಹೇಳಿದ್ದಾರೆ" ಎಂದರು.

ಆಮಿಷ ಒಡ್ಡಿದವರ ವಿರುದ್ಧ ದೂರು ನೀಡಲಾಗುವುದೇ ಎಂದು ಕೇಳಿದಾಗ, "ಖಂಡಿತ ದೂರು ನೀಡಲಾಗುವುದು. ಕಾನೂನು ಮುಂದಿನದನ್ನು ನೋಡಿಕೊಳ್ಳಲಿದೆ" ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ