Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೆ.ಆರ್.ಐ.ಡಿ.ಎಲ್. ಆರೋಪ- ವರದಿ ಬಳಿಕ ಕ್ರಮ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಕೆ.ಆರ್.ಐ.ಡಿ.ಎಲ್.ನಲ್ಲಿ ಶೇ.7 ರಷ್ಟು ಜಾಬ್ ಉಳಿತಾಯ ಕಡಿತಕ್ಕೆ ಬಿಜೆಪಿ ಸರ್ಕಾರದ ಅವಧಿಯಲ್ಲೇ ಸುತ್ತೋಲೆ ಹೊರಡಿಸಲಾಗಿದ್ದರೂ, ಪ್ರತಿಪಕ್ಷ ನಾಯಕರು ಕಾಂಗ್ರೆಸ್ ಸರ್ಕಾರ ದೂಷಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ. 

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕೆ.ಆರ್.ಐ.ಡಿ.ಎಲ್.ನ ಇಬ್ಬರು ಎಂಜಿನಿಯರುಗಳ ಮೇಲೆ ಪುತ್ತೂರಿನ ಶಾಸಕ  ಅಶೋಕ್ ಕುಮಾರ್ ರೈ ಆರೋಪ ಮಾಡಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಷಯ ತಿಳಿದ ಕೂಡಲೇ ತಾವು ಸೂಪರಿಂಟೆಂಡೆಂಟ್ ಎಂಜಿನಿಯರ್ ದರ್ಜೆಯ ಅಧಿಕಾರಿ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿ, 7 ದಿನಗಳಲ್ಲಿ ವರದಿ ನೀಡಲು ಸೂಚಿಸಿರುವುದಾಗಿ ತಿಳಿಸಿದರು.

ವರದಿಯಲ್ಲಿ ಶಾಸಕರು ಹೆಸರಿಸಿರುವ ಎಂಜಿನಿಯರುಗಳು ಭ್ರಷ್ಟಾಚಾರ ಮಾಡಿರುವುದು ಸಾಬೀತಾದರೆ, ಅಮಾನತು ಮಾಡಿ, ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದ ಅವರು, ತನಿಖಾ ವರದಿ ಬರುವ ಮೊದಲೇ ಪ್ರತಿಪಕ್ಷದ ನಾಯಕರು ಆತುರ ತೋರುತ್ತಿರುವುದು ಹಾಸ್ಯಾಸ್ಪದ ಎಂದರು. 

ಗ್ರಾಮೀಣಾಭಿವೃದ್ಧಿ ಇಲಾಖೆ ಪಾರದರ್ಶಕ, ಜನಸ್ನೇಹಿ ಮತ್ತು ಭ್ರಷ್ಟಾಚಾರ ಮುಕ್ತವಾಗಿರಬೇಕು ಎಂಬುದು ತಮ್ಮ ಆಶಯವಾಗಿದೆ ಎಂದ ಈಶ್ವರ ಖಂಡ್ರೆ, ಯಾವುದೇ ಅಧಿಕಾರಿ, ಸಿಬ್ಬಂದಿ ಸಚಿವರ ಹೆಸರು ಹೇಳಿ ಭ್ರಷ್ಟಾಚಾರ ಮಾಡಿರುವ ಬಗ್ಗೆ ಸಾಕ್ಷ್ಯ, ಪುರಾವೆ ಸಹಿತ ದೂರು ಬಂದರೆ ಯಾವ ಮುಲಾಜಿಗೂ ಒಳಗಾಗದೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿದರು.

ಅಶೋಕ್ ಕುಮಾರ್ ರೈ ಅವರ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ಐ.ಡಿ.ಎಲ್. ಎಂ.ಡಿ. ಸ್ಪಷ್ಟೀಕರಣ ನೀಡಿದ್ದಾರೆ. ಕೆಆರ್.ಐ.ಡಿ.ಎಲ್.ನ 203ನೇ ಆಡಳಿತ ಮಂಡಳಿ ಸಭೆಯಲ್ಲೇ ನಿರ್ಣಯ ಕೈಗೊಂಡು 2021ರ ಆಗಸ್ಟ್ 21ರಂದು ಶೇ.7ರಷ್ಟು ಜಾಬ್ ಉಳಿತಾಯ ಕಡಿತಕ್ಕೆ ಸುತ್ತೋಲೆ ಹೊರಡಿಸಲಾಗಿದೆ. ಆಗ ಯಾರ ಸರ್ಕಾರ ಇತ್ತು, ಯಾರು ಕೆ.ಆರ್.ಐ.ಡಿ.ಎಲ್. ಅಧ್ಯಕ್ಷರಾಗಿದ್ದರು ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದರು. 

ಕೆಆರ್.ಐ.ಡಿ.ಎಲ್. ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಯಾಗಿದ್ದು, 203ನೇ ಆಡಳಿತದ ಮಂಡಳಿ ಸಭಾ ನಡಾವಳಿಯಂತೆ ಈ ರೀತಿ ಚಾರ್ಚ್ ಪಡೆಯಲು  ಅವಕಾಶ ಇದೆ. ಬಹುಶಃ ಮಾಹಿತಿಯ ಕೊರತೆಯಿಂದ ಶಾಸಕರು ಪತ್ರ ಬರೆದಿರಬಹುದು ಎಂದು ಈಶ್ವರ ಖಂಡ್ರೆ ಹೇಳಿದರು.

ಆದರೂ ಸಚಿವ ಹೆಸರು ಹೇಳಿ ಹಣ ಕೇಳುತ್ತಿದ್ದಾರೆ ಎಂಬ ಗುರುತರ ಆರೋಪ ಬಂದಿರುವ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ಕೊಟ್ಟಿದ್ದೇನೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗವುದು ಎಂದರು.

1998ರಿಂದ 2006ರವರೆಗೆ ಅಶೋಕ್ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಆಗ ಕಾನೂನು ಬಾಹೀರವಾಗಿ ಅನರ್ಹ ಫಲಾನುಭವಿಗಳಿಗೆ 2500 ಎಕರೆ ಗೋಮಾಳವನ್ನು ಹಂಚಿಕೆ  ಮಾಡಿದ್ದಾರೆ ಎಂಬ ಆರೋಪ ಬಂದಿತ್ತು. ಅಶೋಕ್ ಸೇರಿ 10 ಜನರ ವಿರುದ್ಧ ಎಫ್.ಐ.ಆರ್. ಕೂಡ ದಾಖಲಾಗಿತ್ತು. ಅದಾದ ಬಳಿಕ 2019ರಿಂದ 2023ರವರೆಗೆ ಅವರು ಕಂದಾಯ ಸಚಿವರಾಗಿದ್ದರು. ಆಗ ಅವರು ರಾಜೀನಾಮೆ ಕೊಟ್ಟರೇನು? ಎಂದು  ಪ್ರಶ್ನಿಸಿದರು.

ಲೊಟ್ಟೆ ಗೊಲ್ಲಹಳ್ಳಿಯ ಜಮೀನು ಡಿನೋಟಿಫಿಕೇಷನ್ ಗೆ ಸಂಬಂಧಿಸಿದ ಮತ್ತೊಂದು ಆರೋಪವೂ ಅವರ ಮೇಲಿತ್ತು. ರಾಜಕೀಯದಲ್ಲಿ ಆಧಾರ ರಹಿತ ಆರೋಪಗಳೂ ಬರುತ್ತವೆ. ಪ್ರತಿಪಕ್ಷಗಳು ತಾಳ್ಮೆಯಿಂದ ಇರಬೇಕು ಎಂದು  ಆರ್. ಅಶೋಕ್ ಅವರಿಗೆ ಕಿವಿಮಾತು ಹೇಳಿದರು.

ಬಿಜೆಪಿ ಕಾರ್ಯಕಾಲದಲ್ಲಿ ಏನೆಲ್ಲಾ ಭ್ರಷ್ಟಾಚಾರ ನಡೆಯಿತು ಎಂಬುದು ರಾಜ್ಯದ ಜನತೆಗೆ ತಿಳಿದಿದೆ. ಬಿಜೆಪಿಯವರಿಗೆ ಕದ್ದು ಮುಚ್ಚಿ ವ್ಯವಹಾರ ಮಾಡಿ ಅಭ್ಯಾಸವಾಗಿದೆ. ತಮ್ಮಂತೆಯೇ ಇತರರೂ ಭ್ರಷ್ಟಾಚಾರಿಗಳು ಎಂದು ಭಾವಿಸುತ್ತಾರೆ. ಹೀಗಾಗಿ ತಾವು ಮಾಡಿದ ಅವ್ಯವಹಾರವನ್ನೇ ಬೇರೆಯವರೂ ಮಾಡಿದ್ದಾರೆ ಎಂದುಕೊಂಡಿದ್ದಾರೆ. ಪಾಪ ಎಂದು ಈಶ್ವರ ಖಂಡ್ರೆ ವ್ಯಂಗ್ಯವಾಡಿದರು.

ಪ್ರತಿಪಕ್ಷಗಳಿಗೆ ಸರ್ಕಾರದ ವಿರುದ್ಧ ಆರೋಪ ಮಾಡಲು ಬೇರೆ ವಿಷಯವಿಲ್ಲ. ನಾನು ತಕ್ಷಣವೇ ತನಿಖೆಗೆ ಆದೇಶ ಕೊಟ್ಟ ಮೇಲೂ ಈ ರೀತಿ ಆರೋಪ ಮಾಡುವುದು ಪ್ರತಿಪಕ್ಷ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಈಶ್ವರ ಖಂಡ್ರೆ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ನಗರಪಾಲಿಕೆ ಮಟ್ಟದಲ್ಲಿ ಪೊಲೀಸ್–ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್ ರಚನೆ: ಸಚಿವ ಕೃಷ್ಣ ಬೈರೇಗೌಡಕೆ.ಆರ್.ಐ.ಡಿ.ಎಲ್. ಆರೋಪ- ವರದಿ ಬಳಿಕ ಕ್ರಮ: ಸಚಿವ ಈಶ್ವರ ಖಂಡ್ರೆಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ: ಸಚಿವ ಈಶ್ವರ ಖಂಡ್ರೆಸಾಗರ ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕರ ವಿರುದ್ಧ ಮಾಜಿ ಸಚಿವ ಹರತಾಳು ಹಾಲಪ್ಪ ವಾಗ್ದಾಳಿUPI ಪಾವತಿ ವೇಳೆ ತಪ್ಪಾಗಿ ಬೇರೆಯವರ ಖಾತೆಗೆ ಹಣ ಕಳುಹಿಸಿದ್ದೀರಾ? ವಾಪಸ್ ಪಡೆಯಲು ಹೀಗೆ ಮಾಡಿ!ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಾಳೆ ಮಧ್ಯಾಹ್ನ ‘ಶಿಕ್ಷಕರ ದಿನಾಚರಣೆ’ ಆಚರಿಸಲು ಸರ್ಕಾರ ಆದೇಶBIG NEWS : ನೌಕರರ ಗ್ರಾಚ್ಯುಟಿ ಹಣದಿಂದ ಬಾಕಿ ಮೊತ್ತ ಕಡಿತಗೊಳಿಸುವಂತಿಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶಗಮನಿಸಿ : ಪ್ರತಿಯೊಬ್ಬ ಭಾರತೀಯನ ಮೊಬೈಲ್’ನಲ್ಲೂ ಇರಬೇಕಾದ 5 ಸರ್ಕಾರಿ ಆ್ಯಪ್‌ಗಳಿವು.!ಬೆಂಗಳೂರಿಗರೇ ಗಮನಿಸಿ : 4 ಫ್ಲೈ ಓವರ್ ಗಳಲ್ಲಿ ಇಂದಿನಿಂದ ಈ ವಾಹನಗಳ ಸಂಚಾರ ಸಂಪೂರ್ಣ ನಿಷೇಧ.!ಬೆಂಗಳೂರಿನಲ್ಲಿ 'ಏರೋ ಇಂಡಿಯಾ 2027' ದಿನಾಂಕ ಪ್ರಕಟ: ಫೆಬ್ರವರಿ 8 ರಿಂದ 12 ರವರೆಗೆ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ!