LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಕೀ – ಉತ್ತರ ವೆಬ್ ನಲ್ಲಿ ಪ್ರಕಟ.!

ಬೆಂಗಳೂರು : ದಿನಾಂಕ:30/06/2024 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2024ರ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ದಿನಾಂಕ:08/07/2024 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ ಅಭ್ಯರ್ಥಿಗಳು ಕೆಳಕಂಡ ಸೂಚನೆಗಳನ್ನು ಪಾಲಿಸುವುದು.

  1. ಪತ್ರಿಕೆ-1 ಮತ್ತು ಪತ್ರಿಕೆ-2ಕ್ಕೆ ಸಂಬಂಧಿಸಿದಂತೆ ಪ್ರಕಟಿತ ಕೀ-ಉತ್ತರಗಳಿಗೆ ಆನ್‌ಲೈನ್ ಮೂಲಕ ಆಕ್ಷೇಪಣೆ ಸಲ್ಲಿಸಲು ದಿನಾಂಕ:13/07/2024 ರ ಸಂಜೆ 5.30 ರವರೆಗೆ ಅವಕಾಶ ಕಲ್ಪಿಸಿದೆ.

  2. ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಕೇವಲ ಆನ್‌ಲೈನ್ ಮೂಲಕ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ ಆಕ್ಷೇಪಣೆ ಸಲ್ಲಿಸಿದಲ್ಲಿ, ಅವುಗಳನ್ನು ಪರಿಗಣಿಸಲಾಗುವುದಿಲ್ಲ.

  3. ಅಭ್ಯರ್ಥಿಗಳು ತಮ್ಮ ಅರ್ಜಿ/ ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸುವ ಮೂಲಕ https://schooleducation.karnataka.gov.in ನೋಂದಾಯಿತ ಮೊಬೈಲ್ ಸಂಖ್ಯೆಗೆ ಬರುವ OTP ನಮೂದಿಸಿದ ನಂತರ ಆಕ್ಷೇಪಣೆಗೆ ಸಂಬಂಧಿಸಿದ ವೆಬ್‌ಪೆಜ್ ತೆರೆದುಕೊಳ್ಳುತ್ತದೆ.

  4. ಅಭ್ಯರ್ಥಿಯು ಸಲ್ಲಿಸುವ ಆಕ್ಷೇಪಣೆಗಳೊಂದಿಗೆ ಅಧಿಕೃತ ಆಧಾರ/ ದಾಖಲೆಗಳನ್ನು ಸಲ್ಲಿಸುವುದು.

  5. ಸೂಕ್ತ ಆಧಾರ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

  6. ಆಧಾರ ದಾಖಲೆಗಳು 500KB ಮೀರಬಾರದು.

  7. ವಿಷಯಕ್ಕೆ ಸಂಬಂಧಿಸದ ಅಸಂಬದ್ಧ ದಾಖಲೆಗಳನ್ನು ಹಾಗೂ ಚಿತ್ರಗಳನ್ನು ಅಪ್‌ಲೋಡ್ ಮಾಡಿದಲ್ಲಿ ಅಂತಹ ಅಭ್ಯರ್ಥಿಗಳ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು.

  8. ಜರ್ನಲ್‌ಗಳು, ಮ್ಯಾಗಜಿನ್‌ಗಳು, ಸ್ವತಂತ್ರ ಪ್ರಕಾಶಕರುಗಳ ಪುಸ್ತಕಗಳು, ಗೈಡ್‌ಗಳು, ಇಂಟರ್‌ನೆಟ್ ಮೂಲಗಳು(ವಿಕಿಪೀಡಿಯಾ, ಗೂಗಲ್ ಮಾಹಿತಿ ಅಥವಾ ಅಂತರ್ಜಾಲದಿಂದ ಡೌನ್‌ಲೋಡ್ ಮಾಡಿದ ಯಾವುದೇ ಮೂಲಗಳು) ವಿಡಿಯೋಗಳು, ದಿನಪತ್ರಿಕೆಯಲ್ಲಿನ ಲೇಖನಗಳನ್ನು ಆಧಾರ ದಾಖಲೆಗಳನ್ನಾಗಿ ಪರಿಗಣಿಸುವುದಿಲ್ಲ.

  9. ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ತಂಡವು ಪರಿಶೀಲಿಸಿ ನೀಡುವ ಅಂತಿಮ ಉತ್ತರವನ್ನು ಪರಿಗಣಿಸಲಾಗುವುದು. ತಜ್ಞರ ತಂಡವು ನೀಡುವ ಉತ್ತರವೇ ಅಂತಿಮವಾಗಿರುತ್ತದೆ.


 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ತರಬೇತಿಯಲ್ಲಿ ಸಿಕ್ಸ್ ಪ್ಯಾಕ್ ಪ್ರದರ್ಶಿಸಿದ ವಿರಾಟ್ ಕೊಹ್ಲಿಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆಸ್ವೀಡನ್‌ನ ಶಾಲೆಯಲ್ಲಿ ಗುಂಡಿನ ದಾಳಿ - 11 ಜನರ ಮಾರಣಹೋಮನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!