LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾನೂನು ಪದವಿಧರರಿಗೆ ವೃತ್ತಿ ತರಬೇತಿ; ಅರ್ಜಿ ಆಹ್ವಾನ

 

ಹೊಸಪೇಟೆ: ವಿಜಯನಗರ ಜಿಲ್ಲಾ ವ್ಯಾಪ್ತಿಯ ಹಿಂದುಳಿದ ವರ್ಗಕ್ಕೆ ಸೇರಿದ ಕಾನೂನು ಪದವಿಧರರಿಗೆ 2023-24ನೇ ಸಾಲಿನ ಕಾನೂನು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಬಿ.ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ.

ಸೆ.15 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಹಿಂದುಳಿದ ವರ್ಗಕ್ಕೆ ಸೇರಿದ ಕಾನೂನು ಪದವಿ ಪಡೆದ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ-1ರ ಅಭ್ಯರ್ಥಿಗಳ ಪೋಷಕರ ಆದಾಯ 3.50 ಹಾಗೂ ಪ್ರವರ್ಗ-2ಎ, 3ಎ ಮತ್ತು 3ಬಿ 2.50 ಲಕ್ಷ ಮೀರಿರಬಾರದು. ಜಿಲ್ಲಾ ವ್ಯಾಪ್ತಿಯಲ್ಲಿರುವ, ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷದೊಳಗೆ ಕಾನೂನು ಪದವಿ ಪಡೆದು ಕರ್ನಾಟಕ ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿಸಿರಬೇಕು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ, ಅರ್ಜಿಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸಬೇಕು.

ಆಸಕ್ತ, ಅರ್ಹ ಅಭ್ಯರ್ಥಿಗಳು https://zpvijayanagara.karnataka.gov.in ಮೂಲಕ ಹಿಂದುಳಿದ ವರ್ಗಗಳ ಕಾನೂನು ಪದವೀಧರ ಶಿಷ್ಯವೇತನಕ್ಕೆ ಅರ್ಜಿ ಅರ್ಜಿ ನಮೂನೆಯನ್ನು ಪಡೆಯಬಹುದಾಗಿದೆ.

ಮಾಹಿತಿಗಾಗಿ ನಗರದ 35ನೇ ವಾರ್ಡ್ ಆಕಾಶವಾಣಿ ಹತ್ತಿರದ ಪುಣ್ಯಾನಂದಪುರಿ ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!