LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕ್ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಬಿಷ್ಕೆಕ್: ಕಿರ್ಗಿಸ್ತಾನ್‌ನಲ್ಲಿರುವ ಭಾರತ, ಪಾಕ್ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಹೀಗಾಗಿ ಅಲ್ಲಿರುವ ಭಾರತೀಯ ನಾಗರಿಕರಿಗೆ ಮನೆಯೊಳಗೆ ಇರುವಂತೆ ಭಾರತ ಒತ್ತಾಯ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಭಾರತೀಯ ರಾಯಭಾರ ಕಚೇರಿ, 'ನಾವು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ. ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಮತ್ತುಯಾವುದೇ ಸಮಸ್ಯೆಯ ಸಂದರ್ಭದಲ್ಲಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಲಾಗಿದೆ. ಸಹಾಯವಾಣಿ ಸಂಖ್ಯೆ 0555710041 ಸಂಪರ್ಕಿಸಬಹುದು' ಎಂದು ತಿಳಿಸಿದೆ.

ಬಿಷ್ಕೆಕ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ವರದಿಯಾಗಿದೆ. ಈಗಾಗಲೇ ಹಲವಾರು ಪಾಕಿಸ್ತಾನಿ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ನಲ್ಲಿ ಗುಂಪು ಹಿಂಸಾಚಾರದಲ್ಲಿ ಗಾಯಗೊಂಡಿದ್ದಾರೆ. ಹೀಗಾಗಿ ಭಾರತೀಯ ವಿದ್ಯಾರ್ಥಿಗಳು ನಿಯಮಿತವಾಗಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರುವಂತೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೂಚನೆ ನೀಡಿದ್ದಾರೆ.

ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ವಿದ್ಯಾರ್ಥಿಗಳು ವಾಸಿಸುವಂತಹ ಬಿಷ್ಕೆಕ್‌ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯಗಳ ಹಾಸ್ಟೆಲ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಈ ದಾಳಿಯಲ್ಲಿ ಮೂವರು ಪಾಕಿಸ್ತಾನಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಇನ್ನು ಈ ದಾಳಿಯಲ್ಲಿ ಯಾವುದೇ ಭಾರತೀಯ ವಿದ್ಯಾರ್ಥಿಗಳು ಗಾಯಗೊಂಡಿಲ್ಲ ಎಂದು ತಿಳಿದುಬಂದಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ.!ತುಂತುರು ಮತ್ತು ಹನಿ ನೀರಾವರಿ ಘಟಕಗಳ ಉಪಯೋಗ ಮತ್ತು ನಿರ್ವಹಣೆ ಕುರಿತು ತರಬೇತಿಚಿಗಟೇರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಲಹಾ ಸಮಿತಿಗೆ ಸದಸ್ಯರುಗಳ ಆಯ್ಕೆವಚನ- ---ಭೋಗಣ್ಣ     .!'ಅಭಿವೃದ್ಧಿದಾಯಕ ಭಾರತ ನಿರ್ಮಿಸಲು ಮಹಿಳೆಯರ ಆಶೀರ್ವಾದ ನನಗೆ ಸ್ಫೂರ್ತಿ' - ಪ್ರಧಾನಿ ಮೋದಿನಾಳೆ ಅ.20ರಂದು ಈ ವಾರ್ಡ್ ಗಳಲ್ಲಿ ವಿದ್ಯುತ್ ಇರಲ್ಲ.!ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ | CM Siddaramaiahಗಡ್ಡ ಇಲ್ಲದ ಗೆಳೆಯ ಬೇಕು, ‘ಗಡ್ಡ ತೆಗೆಯಿರಿ, ಪ್ರೀತಿ ಉಳಿಸಿ’ ಎಂಬ ಘೋಷಣೆಯೊಂದಿಗೆ ಯುವತಿಯರ ಪ್ರತಿಭಟನೆಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿ: ಹೆಚ್.ಡಿಕೆ.!ಭೋವಿ ನಿಗಮದಲ್ಲಿ ಹಗರಣಕ್ಕೆ ನಮ್ಮದೇನು ಪಾತ್ರವಿಲ್ಲ.! MLC ಸುನೀಲ್ ವಲ್ಯಾಪುರೆ ಸ್ಪಷ್ಟನೆ