LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

"ಕೀರ್ತಿ ಚಕ್ರ" ಪ್ರಶಸ್ತಿ ಮತ್ತು ಹಣದೊಂದಿಗೆ ವಿದೇಶಕ್ಕೆ ತೆರಳಲು ಸೊಸೆಯ ಯತ್ನ - ಹುತಾತ್ಮ ಕ್ಯಾಪ್ಟನ್ ಅಂಶುಮಾನ್ ಸಿಂಗ್ ತಂದೆಯ ಆರೋಪ

ನವದೆಹಲಿ: ನನ್ನ ಮಗ ಹುತಾತ್ಮನಾದ ನಂತರ ಸೊಸೆ ಸ್ಮೃತಿ ಸಿಂಗ್ ಕೀರ್ತಿ ಚಕ್ರ ಪ್ರಶಸ್ತಿ ಹಾಗೂ ಹಣದೊಂದಿಗೆ ಆಸ್ಟ್ರೇಲಿಯಾಗೆ ಪಲಾಯನ ಮಾಡಲು ಯತ್ನಿಸುತ್ತಿದ್ದಾರೆ ಎಂದು ಹುತಾತ್ಮ ಕ್ಯಾಪ್ಟನ್ ಅಂಶುಮಾನ್ ಸಿಂಗ್ ತಂದೆ ರವಿ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಜುಲೈ 7 ರಂದು, ಸ್ಮೃತಿ ಮತ್ತು ಅವರ ಅತ್ತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಎರಡನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಕೀರ್ತಿ ಚಕ್ರ ಪ್ರಶಸ್ತಿಯನ್ನು ಸ್ವೀಕರಿಸಿದರು.

ಆದರೆ ಈಗ ಎಲ್ಲ ಸೌಲಭ್ಯದೊಂದಿಗೆ ವಿದೇಶಕ್ಕೆ ಪಲಾಯನ ಮಾಡಲು ತಯಾರಿ ನಡೆಸಿದ್ದಾರೆ. ನಿಜವಾಗಿಯೂ ಆಕೆ ನನ್ನ ಮಗನನ್ನು ಪ್ರೀತಿ ಮಾಡಿಯೇ ಇರಲಿಲ್ಲ. ಬದಲಾಗಿ ಪ್ರೀತಿ ಹೆಸರಲ್ಲಿ ವಂಚನೆ ಮಾಡಿದ್ದಾರೆ. ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಓದುವಾ ಮೊದಲ ನೋಟದಲ್ಲೇ ಅಂಶುಮಾನ್ ಜೊತೆ ಪ್ರೀತಿ ಆಗಿದೆ ಎಂದು ಸ್ಮೃತಿ ಹೇಳಿದ್ದಾರೆ. ಪಂಜಾಬ್‌ನ ಗುರುದಾಸ್‌ಪುರದಲ್ಲಿರುವ ತನ್ನ ಮನೆಗೆ ಬಂದಿದ್ದ ಸೊಸೆ ಸ್ಮೃತಿ ಸಿಂಗ್, ಅಂಶುಮಾನ್ ಅವರ ಬಟ್ಟೆ ಮತ್ತು ಫೋಟೋ ಆಲ್ಬಮ್‌ನೊಂದಿಗೆ ಶೌರ್ಯ ಪ್ರಶಸ್ತಿಯನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಕೂಡ ರವಿ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ. ಜೊತೆಗೆ ಯೋಧರು ಹುತಾತ್ಮರಾದ ನಂತರ ಸಲ್ಲುವ ಸಮ್ಮಾನ ಹಾಗೂ ಸೌಲಭ್ಯಗಳ ಬಗ್ಗೆ ಇರುವ 'ನೆಕ್ಸ್ಟ್ ಆಫ್ ಕಿನ್' ಕಾನೂನನ್ನು ತಿದ್ದುಪಡಿ ಮಾಡಬೇಕು ಎಂದು ಹುತಾತ್ಮ ಅಂಶುಮಾನ್ ತಂದೆ ಒತ್ತಾಯಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನ