LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೃತಕ ಬಣ್ಣ ಬಳಸಿ ಆಹಾರ ಪದಾರ್ಥಗಳು ತಯಾರಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

 

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಹೋಟೆಲ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಅಂಗಡಿಗಳು ಹಾಗೂ ಇತರೆ ಆಹಾರ ತಯಾರಿಕಾ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ, ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸುವ ಜತೆಗೆ ಕೃತಕ ಬಣ್ಣ ಬಳಸಿ ಆಹಾರ ಪದಾರ್ಥಗಳು ತಯಾರಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸುವಂತೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ‍್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸೇವನೆಯು ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಸರ‍್ವಜನಿಕರಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಶಾಲೆ ಅಂಗನವಾಡಿ ಮತ್ತು ವಸತಿ ನಿಲಯಗಳಿಗೆ ಭೇಟಿ ನೀಡಿ ಆಹಾರ ತಯಾರಿಸುವುದರ ಬಗ್ಗೆ, ಸ್ವಚ್ಛತೆಯ ಬಗ್ಗೆ ಪರಿಶೀಲಿಸಿ ಅರಿವು ಮೂಡಿಸಬೇಕು. ಬೀದಿಬದಿ ವ್ಯಾಪಾರಿಗಳು ,ಹೋಟೆಲ್ ಗಳು, ರೆಸ್ಟೋರೆಂಟ್ ಗಳಿಗೆ ಭೇಟಿ ಮಾಡಿ ಕೃತಕ ಬಣ್ಣ ಬಳಸದಂತೆ ಎಚ್ಚರಿಕೆವಹಿಸಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನಗೊಳಿಸಲು ಇಲಾಖಾವಾರು ವಿಷಯಗಳ ಬಗ್ಗೆ ರ‍್ಚಿಸಿ ನೋಂದಣಿ ಪರವಾನಗಿ ತೆಗೆದುಕೊಳ್ಳುವಂತೆ ಸೂಚಿಸಿದರು.

ವೆಜ್ ಆಹಾರ,  ಚಿಕನ್, ಫಿಶ್ ಇತರೆ ಕಬಾಬ್ ಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸಿದರೆ ಏಳು ರ‍್ಷಗಳಿಂದ ಜೀವಾವಧಿ ಜೈಲು ಶಿಕ್ಷೆ ಮತ್ತು ೧೦ ಲಕ್ಷದವರೆಗೆ ದಂಡವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-೨೦೦೬ ರ ನಿಯಮ ೫೯ರಡಿ  ವಿಧಿಸಲಾಗುವುದು ಎಂದು ತಿಳಿಸಿದರು

ಆಹಾರ ಘಟಕಗಳು ಕಡ್ಡಾಯವಾಗಿ ನೋಂದಣಿ ಮಾಡಿಸಬೇಕು. ನೋಂದಣಿ ಹಾಗೂ ಪರವಾನಗಿಗಳನ್ನು ಹೆಚ್ಚು ಹೆಚ್ಚು ಮಾಡಿಸಿ, ಆಹಾರದ ಸ್ಯಾಂಪಲ್ ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಗ್ರಹಿಸಿ, ಅಸುರಕ್ಷಿತ ಆಹಾರ ಕಂಡುಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ಬಗ್ಗೆ ವರದಿಯಾಗಬೇಕು.

ಆಹಾರ ಉದ್ದಿಮೆ ಸ್ಥಳಗಳಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ಮಾಡಿ, ಬೀದಿ ಬೀದಿಗಳಲ್ಲಿ ತಯಾರಿಸುವ ಆಹಾರದ  ಸುರಕ್ಷತೆ ಹಾಗೂ ಗುಣಮಟ್ಟದ ಬಗ್ಗೆ ನಿಗಾ ವಹಿಸಿ, ನಿಯಮಿತವಾಗಿ ಸರ‍್ವಜನಿಕರಿಂದ ಬಂದಂತಹ ದೂರಿನನ್ವಯ ಆಹಾರ ಮಾದರಿಗಳನ್ನು ಸಂಗ್ರಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆಹಾರ ಸೇವನೆಯಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುವ ಜತೆಯಲ್ಲಿ ಸರ‍್ವಜನಿಕರಿಗೆ ಅರಿವು ಮೂಡಿಸಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಡಾ.ರ‍್ಮೇಂದ್ರ ಮಾತನಾಡಿ  ಜಿಲ್ಲೆಯಲ್ಲಿ ೫೧೭೭ ಆಹಾರ ನೋಂದಣಿ ಹಾಗೂ ೧೫೯೩ ಆಹಾರ ಪರವಾನಗಿ ಇದ್ದು ಒಟ್ಟು ಶೇಕಡ ೧೨೦ ಪ್ರಗತಿ ಸಾಧಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ವಾಪಸ್ ಕಳುಹಿಸಿದ ರಾಜ್ಯಪಾಲರುಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅತ್ಯಾಚಾರ ವಿರೋಧಿಸಿದ್ದಕ್ಕೆ ಗರ್ಭಿಣಿ ಮಹಿಳೆಯನ್ನು ಚಲಿಸುವ ರೈಲಿನಿಂದ ಹೊರಗೆಸೆದ ಕಿರಾತಕ..!!ಅರ್ಚಕನೊಂದಿಗೆ ಅಶ್ಲೀಲ ಚ್ಯಾಟ್ ಮಾಡಿ 10 ಲಕ್ಷ ದೋಖಾ - ಯಕ್ಷಗಾನದ ಸ್ತ್ರೀವೇಷಧಾರಿ ಯುವಕ ಅರೆಸ್ಟ್ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು….!ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ - ತಪ್ಪಿದ ಭಾರೀ ಅನಾಹುತದೆಹಲಿ-ನೋಯ್ಡಾದ ಶಾಲೆಗಳಿಗೆ ಬಾಂಬ್ ಬೆದರಿಕೆ - ಅಧಿಕಾರಿಗಳಿಂದ ಪರಿಶೀಲನೆವೀರೇಂದ್ರ ಹೆಗ್ಗಡೆ ಸಹೋದರನ 7.59 ಎಕರೆ ಭೂ ಮಂಜೂರಾತಿ ರದ್ದುಗೊಳಿಸಿದ ಕೋರ್ಟ್ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ - ಮುಡಾ ಕೇಸ್‌ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರ