LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೃಷಿ ಭಾಗ್ಯ ಯೋಜನೆ : ರೈತರಿಂದ ಅರ್ಜಿ ಆಹ್ವಾನ

ಉಡುಪಿ : ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮರುಜಾರಿಗೊಳಿಸಲಾಗಿದೆ. ಅದೇ ರೀತಿ ಕೃಷಿ ಭಾಗ್ಯ – ಎಸ್.ಡಿ.ಎಂ.ಎಫ್. ಯೋಜನೆಯನ್ನು ಜಿಲ್ಲೆಯ ಬರ ಪೀಡಿತ ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.

ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಘಟಕಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ, ತುಂತುರು (ಹನಿ) ನೀರಾವರಿ ಘಟಕದಡಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

ದಾಖಲೆರೈತರು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆ