LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಲಿದೆ ಎಂಬ ಮಾಹಿತಿ ದೊರಕಿದೆ ಎಂದು ಪಕ್ಷರ ಹಿರಿಯ ಮುಖಂಡರಾಡ ಹಾಗೂ ದೆಹಲಿ ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಹೇಳಿದ್ದಾರೆ.

ದೆಹಲಿಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ಗಂಟೆಗಳ ನಂತರ ನಿನ್ನೆ ಸಂಜೆ ಟ್ವೀಟ್ ಮಾಡಿದ ಅವರು ಅರವಿಂದ್ ಕೇಜ್ರಿವಾಲ್ ಅವರ ನಿವಾಸ ಟಿಎಂಆರ್‌ಡಬ್ಲ್ಯು ಬೆಳಿಗ್ಗೆ ಇಡಿ ದಾಳಿ ನಡೆಸಲಿದೆ ಎಂದು ಸುದ್ದಿ ಬರುತ್ತಿದೆ. ಬಂಧಿಸುವ ಸಾಧ್ಯತೆಯಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಕೇಜ್ರಿವಾಲ್ ಅವರಿಗೆ ಇ.ಡಿ ಸೂಚಿಸಿತ್ತು. ಆದರೆ ಅವರು ವಿಚಾರಣೆಗೆ ಗೈರಾಗಿದ್ದಾರೆ.

ಜಾರಿ ನಿರ್ದೇಶನಾಲಯ ನೀಡುವ ಸಮನ್ಸ್ ಅನ್ನು ಯಾವುದೇ ವ್ಯಕ್ತಿ ಗರಿಷ್ಠ ಮೂರು ಬಾರಿ ಕಡೆಗಣಿಸಬಹುದಾಗಿದೆ. ಈಗ ಕೇಜ್ರಿವಾಲ್ ಅವರು ಈ ಮಿತಿಯನ್ನು ಪೂರೈಸಿದ್ದಾರೆ. ಈಗ ಅವರ ವಿರುದ್ಧ ಜಾಮೀನು ರಹಿತ ವಾರಂಟ್‌ಗೆ ಇ.ಡಿ ಮನವಿ ಸಲ್ಲಿಸಬಹುದು. ಈ ಮೂಲಕ ಅವರು ಕೋರ್ಟ್‌ಗೆ ಹಾಜರಾಗುವಂತೆ ಮಾಡಬಹುದು. ಒಂದು ವೇಳೆ ಜಾಮೀನುರಹಿತ ವಾರಂಟ್‌ಗೆ ಕೂಡ ಸಹಕರಿಸಿದೆ ಇದ್ದರೆ, ಅವರನ್ನು ಬಂಧಿಸಬಹುದಾಗಿದೆ.

ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಇಡಿಗೆ ಸಹಕರಿಸಲು ಸಿದ್ಧರಾಗಿದ್ದಾರೆ . ಆದರೆ ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪ್ರಚಾರದಿಂದ ಅವರನ್ನು ತಡೆಯಬೇಕೆಂಬ ಹಾಗೂ ಅವರನ್ನು ಬಂಧಿಸುವ ಉದ್ದೇಶದಿಂದ ನೋಟಿಸ್ ಕಳುಹಿಸಲಾಗಿದೆ ಇದು "ಕಾನೂನುಬಾಹಿರ" ಎಂದು ಎಎಪಿ ಮೂಲಗಳು ತಿಳಿಸಿವೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಜಲಿ ಹತ್ಯೆ ಕೇಸ್: 'ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ'- ಸಂತೋಷ್ ಲಾಡ್'ದೇವರಾಜೇಗೌಡನಿಗೆ ತಲೆ ಕೆಟ್ಟಿದೆ,ಆಸ್ಪತ್ರೆಗೆ ಸೇರಿಸಬೇಕು'- ಡಿಕೆ ಶಿವಕುಮಾರ್'ಪ್ರಜ್ವಲ್ ಮಾಡಿರುವುದು ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ'- ಎಚ್‌.ಡಿ. ದೇವೇಗೌಡ'CD' ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್ - ದೇವರಾಜೇಗೌಡ ಹೇಳಿಕೆ ಬೆನ್ನಲ್ಲೆ ಜೆಡಿಎಸ್‌ನಿಂದ ಟ್ವೀಟ್ ಸಮರಸಿಎಂ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅರೆಸ್ಟ್ ..!ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭಜರ್ಮನಿಯಿಂದ ಲಂಡನ್‌ಗೆ ಪ್ರಯಾಣ ಬೆಳಸಿದ ಪ್ರಜ್ವಲ್‌ ರೇವಣ್ಣದೆಹಲಿ ಮದ್ಯ ನೀತಿ ಪ್ರಕರಣ: ರಾಜಕೀಯ ಪಕ್ಷವೊಂದನ್ನು ಆರೋಪಿಯನ್ನಾಗಿಸಿದ ದೇಶದ ಮೊದಲ ಕೇಸ್‌ಇವರಿಗೆ ಸಿಗಲ್ಲ ಪಿಎಂ ಕಿಸಾನ್‌ 17ನೇ ಕಂತಿನ ಹಣ