ವಿಜಯನಗರ(ಹೊಸಪೇಟೆ), ನವೆಂಬರ್.18 : ಕೇಂದ್ರ ಪುರಸ್ಕೃತ ಅಮೃತ ಯೋಜನೆ ತಾಂತ್ರಿಕೇತರ ಕಾರ್ಯಕ್ರಮದಡಿ ಕೊಟ್ಟೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೊಳಪಡುವ ಒಟ್ಟು ಐದು ಉದ್ಯಾನವನಗಳನ್ನು ನಿರ್ವಹಣೆ ಮಾಡಲು ಡೇನಲ್ಮ್ ಅಭಿಯಾನದಡಿ ರಚಿತವಾದ ಎಂಐಎಸ್ ನಲ್ಲಿ ನೊಂದಣಿಯಾಗಿರುವ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿoದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೊಟ್ಟೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಡೇನಲ್ಮ್ ಅಭಿಯಾನದಡಿ ರಚಿತವಾದ ಆಸಕ್ತ ಮಹಿಳಾ ಸ್ವ-ಸಹಾಯ ಸಂಘಗಳು ಕೊಟ್ಟೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದ, ಡೇನಲ್ಮ್ ಶಾಖೆಗೆ ಭೇಟಿ ನೀಡಿ ಅರ್ಜಿ ಹಾಗೂ ನಮೂನೆಗಳನ್ನು ಪಡೆದು ನವೆಂಬರ್.25 ರೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಭರ್ತಿಮಾಡಿ ಸಲ್ಲಿಸಬೇಕು. ಒಂದು ಸ್ವಸಹಾಯ ಸಂಘ ಒಂದು ಉದ್ಯಾನವನಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.