ಕ್ರಿಸ್ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!
ಬೆಂಗಳೂರು,: ಕ್ರಿಸ್ಮಸ್ ಹಬ್ಬ ಹಿನ್ನೆಲೆಯಲ್ಲಿ ನಗರದ ಎಲ್ಲಾ ಚರ್ಚ್ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು ನಗರ ಆಯುಕ್ತರು ಸೂಚನೆ ನೀಡಿದ್ದಾರೆ.
ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.