LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಭಾರತ ಮನವಿ- ಎಸ್​ ಜೈಶಂಕರ್‌

ಖಲಿಸ್ತಾನಿ: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಭಾರತ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಮನವಿ ಮಾಡಿದೆ.

ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರಲಿದ್ದು, ಖಲಿಸ್ತಾನಿಗಳ ಮನಸ್ಥಿತಿಯು ಭಾರತ ಹಾಗೂ ಅವರು ವಾಸಿಸುತ್ತಿರುವ ದೇಶಗಳಿಗೆ ಹಾನಿಕಾರಕವಾಗಿದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್‌ ಹೇಳಿದ್ದಾರೆ. ಕೆನಡಾದಲ್ಲಿ ಸಿಖ್ ಫಾರ್ ಜಸ್ಟಿಸ್ ಬ್ಯಾನರ್ ಅಡಿಯಲ್ಲಿ ಕೆಲವು ಪೋಸ್ಟರ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕಿಲ್ ಇಂಡಿಯಾ ಎಂದು ಬರೆಯಲಾಗಿದೆ. ಅಲ್ಲದೇ ಈ ಪೋಸ್ಟರ್‌ನಲ್ಲಿ ಜುಲೈ 8 ರಂದು ನಿಗದಿಯಾಗಿರುವ ಖಲಿಸ್ತಾನ್ ಫ್ರೀಡಂ ರ್‍ಯಾಲಿಗೆ ಜನರನ್ನು ಆಹ್ವಾನಿಸಲಾಗಿದೆ.

https://bcsuddi.com/%e0%b2%b8%e0%b3%81%e0%b2%b0%e0%b2%a4%e0%b3%8d%e0%b2%95%e0%b2%b2%e0%b3%8d-%e0%b2%a4%e0%b3%81%e0%b2%82%e0%b2%a1%e0%b2%be%e0%b2%97%e0%b2%bf-%e0%b2%ac%e0%b2%bf%e0%b2%a6%e0%b3%8d%e0%b2%a6-%e0%b2%b5/

 

ಪೋಸ್ಟರ್ ಪ್ರಕಾರ, ರ್‍ಯಾಲಿಯು ಗ್ರೇಟ್ ಪಂಜಾಬ್ ಬಿಸಿನೆಸ್ ಸೆಂಟರ್ ಮಾಲ್ಟನ್‌ನಿಂದ ಪ್ರಾರಂಭವಾಗಿ ಟೊರೊಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಕೊನೆಗೊಳ್ಳಲಿದೆ. ಖಾಲಿಸ್ತಾನ್ ಟೈಗರ್ ಫೋರ್ಸ್‌ನ ಮಾಜಿ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಹತ್ಯೆ ಮಾಡಲಾಗಿದೆ.

ಕೆನಡಾದಲ್ಲಿ ಭಾರತೀಯ ರಾಯಭಾರಿ, ಹೈಕಮಿಷನರ್ ಸಂಜಯ್ ವರ್ಮಾ ಮತ್ತು ಟೊರೊಂಟೊದಲ್ಲಿರುವ ಭಾರತದ ಕಾನ್ಸುಲ್ ಜನರಲ್ ಅಪೂರ್ವ ಶ್ರೀವಾಸ್ತವ ಅವರ ಚಿತ್ರಗಳು ಮತ್ತು ಹೆಸರುಗಳನ್ನು ಹೊಂದಿರುವ ಖಲಿಸ್ತಾನ್ ಪರ ಪೋಸ್ಟರ್ ಕೆನಡಾದಲ್ಲಿ ಹೊರಬಿದ್ದಿದ್ದು, ಖಲಿಸ್ತಾನಿ ಹರ್ದೀಪ್ ನಿಜ್ಜಾರ್ ಹತ್ಯೆಗೆ ಭಾರತವೇ ಕಾರಣ ಎಂದು ಹೇಳಿಕೊಂಡಿದೆ.

2022 ರಲ್ಲಿ, ಜಲಂಧರ್‌ನಲ್ಲಿ ಪಾದ್ರಿಯೊಬ್ಬರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಖಾಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ನಿಜ್ಜರ್‌ಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಹೀಗಾಗಿ ಮಾರ್ಚ್‌ನಲ್ಲಿ ಖಲಿಸ್ತಾನ ಬೆಂಬಲಿಗರು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರು ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭಾರೀ ಮಳೆ; ಹವಾಮಾನ ಇಲಾಖೆಯ ಎಚ್ಚರಿಕೆ..!