LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗಣೇಶ ಚತುರ್ಥಿ ಹಬ್ಬಕ್ಕೆ ಮೋದಕ ಮಾಡುವ ವಿಧಾನ

ಗಣಪನಿಗೆ ಇಷ್ಟವಾಗುವ ತಿಂಡಿಗಳಲ್ಲಿ ಮೋದಕವೂ ಒಂದು. ಗಣೇಶನನ್ನು ಮೋದಕ ಪ್ರಿಯ ಎಂದು ಕೂಡ ಕರೆಯುತ್ತಾರೆ. ಆದ್ದರಿಂದ ನಿಮಗಾಗಿ ಗಣಪನಿಗೆ ಪ್ರಿಯವಾದ ಮೋದಕ ಸಿಹಿ ಮಾಡುವ ವಿಧಾನ ಇಲ್ಲಿದೆ

ಬೇಕಾಗುವ ಸಾಮಾಗ್ರಿಗಳು
1. ಮೈದಾ ಹಿಟ್ಟು – 1 ಕಪ್
2. ಚಿರೋಟಿ ರವೆ – 1/4 ಕಪ್
3. ಉಪ್ಪು – ಚಿಟಿಕೆ
4. ಬೆಲ್ಲ – 1 ಅಚ್ಚು
5. ಕೊಬ್ಬರಿ ತುರಿ – 1 ಕಪ್
6. ಏಲಕ್ಕಿ ಪುಡಿ
7. ಗಸಗಸೆ – 1 ಚಮಚ
8. ಎಳ್ಳು -ಸ್ವಲ್ಪ
9. ಗೋಡಂಬಿ, ಬಾದಾಮಿ – 3-4 ಚಮಚ
1. ಎಣ್ಣೆ – ಕರಿಯಲು
ಮಾಡುವ ವಿಧಾನ
* ಮೊದಲಿಗೆ ಒಂದು ಬೌಲ್‍ಗೆ ಚಿರೋಟಿ ರವೆ, ಮೈದಾ ಹಿಟ್ಟು, ಉಪ್ಪು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಕಲಸಿಕೊಂಡು ತಟ್ಟೆ ಮುಚ್ಚಿಡಿ.
* ನಂತರ ಒಂದು ಪ್ಯಾನ್ ಅನ್ನು ಒಲೆಯ ಮೇಲಿಟ್ಟು ಅದಕ್ಕೆ ಸೋಸಿಕೊಂಡ ಬೆಲ್ಲದ ನೀರು, ಕೊಬ್ಬರಿ ತುರಿಯನ್ನು ಹಾಕಿ ಫ್ರೈ ಮಾಡಿರಿ.
* ಊರ್ಣ ಸ್ವಲ್ಪ ಗಟ್ಟಿಯಾದಂತೆ ಅದಕ್ಕೆ ಏಲಕ್ಕಿ ಪುಡಿ, ಹುರಿದ ಗಸಗಸೆ, ಪುಡಿ ಮಾಡಿದ ಎಳ್ಳು, ಹುರಿದು ಸಣ್ಣಗೆ ಹೆಚ್ಚಿದ ಗೋಡಂಬಿ, ಬಾದಾಮಿಯನ್ನು ಸೇರಿಸಿ ಮಿಕ್ಸ್ ಮಾಡಿರಿ, ತಣ್ಣಗಾಗಲು ಬಿಡಿ.
* ಈಗ ಹಿಟ್ಟನ್ನು ತೆಗೆದುಕೊಂಡು ಪೂರಿ ಆಕಾರಕ್ಕಿಂತ ಸ್ವಲ್ಪ ಕಡಿಮೆ ಲಟ್ಟಿಸಿ ಅದರೊಳಗೆ 1/2 ಚಮಚ ಊರ್ಣ ಸೇರಿಸಿ ಮಧ್ಯಕ್ಕೆ ಮಡಚಿ
* ಮೋದಕ ರೀತಿಯಲ್ಲಿ ಅಂದರೆ ಬೆಳ್ಳುಳ್ಳಿ ಆಕಾರದಲ್ಲಿ ಮಡಚಿ. ಊರ್ಣ ಆಚೆ ಬಾರದಂತೆ ನೋಡಿಕೊಳ್ಳಿ.
* ಈಗ ಮಾಡಿಟ್ಟುಕೊಂಡ ಹಲವು ಮೋದಕಗಳನ್ನು ಕಾದ ಎಣ್ಣೆಯಲ್ಲಿ ಹಾಕಿ ಕರಿಯಿರಿ.
( ಡ್ರೈಫ್ರೂಟ್ಸ್, ಎಳ್ಳು ಬೇಕಿದ್ದಲ್ಲಿ ಮಾತ್ರ ಬಳಸಬಹುದು ಅದಕ್ಕೆ ಬದಲಾಗಿ ಹುರಿಗಡಲೆ ಪುಡಿ ಬಳಸಬಹುದು)

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!