LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗೋಬಿ, ಕಬಾಬ್ ಬೆನ್ನಲ್ಲೇ ಕೇಕ್, ಬೇಕರಿ ತಿನಿಸುಗಳ ಮೇಲೆ ಆರೋಗ್ಯ ಇಲಾಖೆ ಕ್ರಮಕ್ಕೆ ಸಿದ್ಧತೆ

ಬೆಂಗಳೂರು : ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆಯು ಜನರ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ಗೋಬಿ, ಕಬಾಬ್, ಕಾಟನ್ ಕ್ಯಾಂಡಿ, ಪಾನಿಪುರಿ ತಿನಿಸುಗಳ ಮೇಲೆ ಒಂದಷ್ಟು ನಿರ್ಬಂಧವನ್ನು ಹೇರಿದೆ. ಇದೀಗ ಬೇಕರಿಯ ತಿನಿಸುಗಳ ಮೇಲೆ ನಿರ್ಬಂಧ ತರಲು ಇಲಾಖೆ ತಯಾರಿ ಮಾಡಿಕೊಳ್ಳುತ್ತಿದೆ.

ಮೊದಲಿಗೆ ಜನರು ಹೆಚ್ಚಾಗಿ ಸೇವಿಸುವಂತ ಕೇಕ್ ಗಳ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ. ಇದಕ್ಕೆ ಪೂರಕವಾಗಿ ಕೇಕ್‌ಗೆ ಬಳಸುವ ಮೈದಾಹಿಟ್ಟು, ಕೋಕೋ ಪೌಡರ್, ಕ್ರೀಮ್‌ಗಳಿಗೆ ಬಳಸುವ ಪದಾರ್ಥಗಳು, ಫ್ಲೇವರ್‌ಗಳು ಹಾಗೂ ಬಣ್ಣ ಬಣ್ಣವಾಗಿರಲು ಬಳಸುವ ಕಲರ್‌ಗಳನ್ನ ಪರಿಶೀಲಿಸಲಾಗುತ್ತಿದೆ. ಪೈನಾಪಲ್, ರೆಡ್ ವೆಲ್ವೆಟ್, ಚಾಕೋಲೇಟ್ ಸೇರಿದಂತೆ ವಿವಿಧ ಫ್ಲೇವರ್‌ ನ ಕೇಕ್ ಗಳ ತಯಾರಿಕೆಗೆ ಅಥವಾ ಅದಕ್ಕೆ ಹಾಕುವ ಪದಾರ್ಥಗಳು ಜನರ ಆರೋಗ್ಯಕ್ಕೆ ಪೂರಕವಾ ಅಥವಾ ಮಾರಕವಾ ಎಂದು ತಿಳಿಯಲು ಇಲಾಖೆ ಮುಂದಾಗಿದೆ.

ಈಗಾಗಲೇ ಇಲಾಖೆಯು ಸುಮಾರು 264 ಕಡೆಗಳಲ್ಲಿ ಕೇಕ್‌ಗಳ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದೆ. ಇದರ ವರದಿಯಾಗಿ ಕಾಯುತ್ತಿದ್ದು, ವರದಿ ಪಾಸಿಟಿವ್ ಬಂದರೆ ಕೆಲವೊಂದು ಪದಾರ್ಥಗಳನ್ನು ನಿರ್ಬಂಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಗೊಂಡನಹಳ್ಳಿ ಶ್ರೀ ಚೆಲುಮೇರುದ್ರ ಸ್ವಾಮಿಯ ರಥೋತ್ಸವಸಾಲದಿಂದ ಮುಕ್ತಿಗೆ ಯಂತ್ರ ಮಂತ್ರ ಮತ್ತು ಪರಿಹಾರ ಇಲ್ಲಿದೆ.!ವಚನ: ಸಿದ್ಧರಾಮೇಶ್ವರ .!ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ..!ಬೆಂಗಳೂರಿಗೆ ಬಿಸಿಲಾತಂಕ : ಫೆಬ್ರವರಿಯಲ್ಲೇ ಬಿಸಿಲು ಧಗೆ ಹೆಚ್ಚಳ - 42 ಡಿ.ಸೆ. ದಾಟುವ ನಿರೀಕ್ಷೆ!ರಾಜ್ಯದಲ್ಲಿ 5 ಹೊಸ ಮಿನಿ ಏರ್‌ಪೋರ್ಟ್‌ ನಿರ್ಮಾಣ..: ಎಲ್ಲೆಲ್ಲಿ ಗೊತ್ತಾ…?ಚುನಾವಣೆಯಲ್ಲಿ ಗೆದ್ದ ಬಿಜೆಪಿ: ದೆಹಲಿ ಜನತೆಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ'ಜನರ ಆದೇಶವನ್ನ ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ'- ಕೇಜ್ರಿವಾಲ್ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ!; APP- Congress ನ್ನು ಟ್ರೋಲ್ ಮಾಡಿದ ಒಮರ್ ಅಬ್ದುಲ್ಲಾಇನ್ಫೋಸಿಸ್ : 400 ತರಬೇತಿನಿರತ ಉದ್ಯೋಗಿಗಳ ವಜಾ