LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಂದ್ರಯಾನ 3 ಉಡಾವಣೆಯ ಕೌಂಟ್​ಡೌನ್ ನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ನಿಧನ

ಬೆಂಗಳೂರು:ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ವಿಜ್ಞಾನಿ ಎನ್ ಎನ್.ವಲಮರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಚಂದ್ರಯಾನ-3 ಕೌಂಟ್ ಡೌನ್ ನೀಡಿದ್ದರು. ರಾಕೆಟ್ ಉಡಾವಣೆಯ ಸಮಯದಲ್ಲಿ ಕೌಂಟ್​ಡೌನ್ ಎಂಬುದು ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ.

ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, "ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!" ಎಂದು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್‌ಎಸ್ ಐಸಿ, ಐಆರ್‌ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.

ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ - ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಡಿಯುವ ನೀರಿನ ತೆರಿಗೆ ಹೆಚ್ಚಳ- ಜನರಿಗೆ ಶಾಕ್ ನೀಡಿದ ಸರ್ಕಾರ'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತ