LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ ತಾಲ್ಲೂಕು ಕಸಾಪ ಅಧ್ಯಕ್ಷರ ಪದಗ್ರಹಣ ಮತ್ತು ಕನ್ನಡ ಕರೋಕೆ ಗಾಯನ .!

 

 

ಚಿತ್ರದುರ್ಗ :ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ.

ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ ಜಿತ್ರದುರ್ಗ ತಾಲ್ಲೂಕು ಅಧ್ಯಕ್ಷರ ಪದಗ್ರಹಣ ಮತ್ತು ಕನ್ನಡ ಹಾಡುಗಳ ಕರೋಕೆ ಸ್ಪರ್ಧೇಯಲ್ಲಿ ಮಾತನಾಡಿದರು. ಸಾಹಿತ್ಯವನ್ನು ಓದುವ, ಹಾಡುವ ಅಭ್ಯಾಸ ಉತ್ತಮ ಹವ್ಯಾಸಗಳಲ್ಲಿ ಪ್ರಮುಖವಾಗಿದೆ.

ನಾಡು,ನುಡಿಯ ಹೆಮ್ಮೆಯನ್ನು ಸಾರುವ ಹಾಡುಗಳು ಹೆಚ್ಚಿನ ಪ್ರಖ್ಯಾತಿಯನ್ನು ಪಡದಿವೆ. ಹಾಡುಗಳನ್ನು ಹಾಡುವ ಹವ್ಯಾಸ ವೈಯುಕ್ತಿಕವಾಗಿ ನೆಮ್ಮದಿ ಮತ್ತು ಸಂತೋಷವನ್ನು ನೀಡುತ್ತದೆ. ಜಂಜಾಟದ ಬದುಕಿನಲ್ಲಿ ಹಾಡುಗಾರಿಕೆಯನ್ನು ಹೆಚ್ಚಿನ ಜನರು ರೂಢಿಸಿಕೊಂಡಿದ್ದಾರೆ. ನಗರಗಳಲ್ಲಿ ಕರೋಕೆ ಕ್ಲಬ್‌ಗಳು ಅಸ್ತಿತ್ವದಲ್ಲಿವೆ. ಸಾಹಿತ್ಯ ಪರಿಷತ್ತು ಇಂಥಹ ವಿನೂತನ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಮನೆಯಲ್ಲಿ ಮೊಬೈಲ್‌ಗಳ ಮೂಲಕ ಹಾಡುವಿಕೆ ರೂಢಿಸಿಕೊಂಡಿರುವ ಗಾಯಕರಿಗೆ ಇದು ಉತ್ತಮ ಅವಕಾಶವಾಗಿದೆ.

ಹಾಡುಗಾರರು ಮೊದಲು ತಮಗೆ ಸೂಕ್ತವಾದ ಹಾಡುಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ವೇದಿಕೆಯ ಮೇಲೆ ಹಾಡುವಾಗ ಯಾವುದೇ ರೀತಿಯ ಭಯವನ್ನು ಹೊಂದದೆ ಧೈರ್ಯದಿಂದ ಸ್ವತಂತ್ರವಾಗಿ ನಿರರ್ಗಳವಾಗಿ ಹಾಡುವುದನ್ನು ಅಭ್ಯಾಸ ಮಾಡಬೇಕು. ನಿರಂತರ ಅಭ್ಯಾಸದಿಂದ ಉತ್ತಮ ಹಾಡುಗಾರರಾಗುವುದು ಸಾಧ್ಯ ಎಂದು ಹೇಳಿದರು.

ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, ಜಿಲ್ಲಾ ಕೇಂದ್ರದಲ್ಲಿ ಕನ್ನಡದ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸಲು ಯುವಕರಾದ ವಿ.ಎಲ್.ಪ್ರಶಾಂತ್‌ರವರಿಗೆ ತಾಲ್ಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಅವರು ನಿರಂತರವಾಗಿ ನಾಡು,ನುಡಿಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಮಂಡ್ಯದಲ್ಲಿ ಜರುಗುವ ಅಖಿಲ ಭಾರತ ಸಮ್ಮೇಳನದ ಅಂಗವಾಗಿ ಸಾಗುತ್ತಿರುವ ರಥ ಮಂಗಳವಾರ ಜಿಲ್ಲೆಯನ್ನು ಪ್ರವೇಶಿಸಲಿದೆ. ಮೂರು ದಿನಗಳ ಕಾಲ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಸಂಚರಿಸಲಿದೆ ಎಂದರು.

ನೂತನ ತಾಲ್ಲೂಕು ಅಧ್ಯಕ್ಷ ವಿ.ಎಲ್.ಪ್ರಶಾಂತ್ ಮಾಡನಾಡಿ, ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದ ಪ್ರಮುಖ ಸಾಂಸ್ಕೃತಿಕ ಸಂಸ್ಥೆಯಾಗಿದೆ. ಮಕ್ಕಳು ಮತ್ತು ಯುವಕರಿಗೆ ತಲುಪುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ತಾಲ್ಲೂಕಿನ ಹಿರಿಯರ ಮತ್ತು ಕಿರಿಯರ ಸಹಕಾರದಿಂದ ಉತ್ತಮ ಕಾರ್ಯಕ್ರಮಗಳನ್ನು ನೀಡಲಾಗುವುದು ಎಂದರು.

ತೀರ್ಪುಗಾರರಾರರಾಗಿ ಡಾ.ಬಿ.ಎ.ಸೇತಾರಾಂ ಮತ್ತು ನಿವೃತ್ತ ಶಿಕ್ಷಕ ಸಿದ್ದಪ್ಪ ನಿಲುವಂಜಿ ಭಾಗವಹಿಸಿದ್ದರು. ಸೀನಿಯರ್ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು ಡಿ.ಎ.ಆರ್.ಪೇದೆ ಮನು, ದ್ವಿತೀಯ ಸ್ಥಾನವನ್ನು ರಾಘವೇಂದ್ರ ರಾವ್ ಮತ್ತು ಧನಂಜಯ್, ತೃತೀಯ ಸ್ಥಾನವನ್ನು ಡಾ.ನರಹತಿ ಮತ್ತು ರಮ್ಯ ಪಡೆದರು.

ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಶಾಲೂಮ್, ದ್ವಿತೀಯ ಸ್ಥಾನವನ್ನು ಇಂಪನಾ ಮತ್ತು ತೃತೀಯ ಸ್ಥಾನವನ್ನು ನಂದೀಶ್ ಪಡೆದರು. 43 ಸ್ಪರ್ಧೇಗಳು ಕನ್ನಡ ಕರೋಕೆ ಗಾಯನದಲ್ಲಿ ಭಾಗವಹಿಸಿದ್ದರು.

ಕಸಾಪ ಪದಾಧಿಕಾರಿಗಳಾದ ಸಿ.ಚೌಳೂರು ಲೋಕೇಶ, ವಿ.ಶ್ರೀನಿವಾಸ ಮಳಲಿ, ಕೆ.ಜಿ.ಅಜಯ್,ವಿಶ್ವನಾಥ್,

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!