LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿಯಾ ಸೀಡ್ಸ್: ಪುಟ್ಟದಾಗಿದ್ದರು ಬಹಳ ಉಪಕಾರಿ

ಚಿಯಾ ಬೀಜಗಳು ಚಿಕ್ಕದಾಗಿರಬಹುದು, ಆದರೆ ಅವು ಪೋಷಕಾಂಶಗಳಲ್ಲಿ ನಂಬಲಾಗದಷ್ಟು ಸಮೃದ್ಧವಾಗಿವೆ. ಪ್ರಾಚೀನ ಅಜ್ಟೆಕ್ ಮತ್ತು ಮಾಯಾ ಆಹಾರಗಳಲ್ಲಿ ಪ್ರಧಾನವಾದ ಈ ಬೀಜಗಳನ್ನು ಶತಮಾನಗಳಿಂದ ತಮ್ಮ ಆರೋಗ್ಯ ಪ್ರಯೋಜನಗಳಿಗಾಗಿ ಹೆಸರಿಸಲಾಗಿದೆ.ಆರೋಗ್ಯದ ಸುಧಾರಣೆಯಲ್ಲಿ ಈ ಚಿಯಾ ಬೀಜಗಳು ಬಹು ಮುಖ್ಯವಾದ ಕೆಲಸವನ್ನು ನಿರ್ವಹಿಸುತ್ತದೆ.

ಅತೀ ಹೆಚ್ಚಿನ ಪ್ರಮಾಣದಲ್ಲಿ ನಾರಿನಂಶ, ಪ್ರೋಟೀನ್, ಕ್ಯಾಲ್ಸಿಯಂ ಹಾಗೂ ಆರೋಗ್ಯಕರವಾದ ಕೊಬ್ಬುಗಳನ್ನು ಈ ಬೀಜಗಳು ಹೊಂದಿವೆ. ಚಿಯಾ ಬೀಜಗಳನ್ನು ರಾತ್ರಿ ಮಲಗುವ ಮುನ್ನ ತಣ್ಣೀರಿನಲ್ಲಿ ನೆನೆಸಿ ಮರುದಿನ ಬೆಳಿಗ್ಗೆ ಎದ್ದ ತಕ್ಷಣ ಸೇವಿಸಬಹುದು. ಮುಂಜಾನೆ ಹೊರತುಪಡಿಸಿ ಯಾವುದೇ ಸಮಯದಲ್ಲಿ ಇದನ್ನು ನೀರಿನೊಂದಿಗೆ ಸೇವಿಸಬಹುದು.

ಜೀರ್ಣಕ್ರಿಯೆಗೆ ಸಹಕಾರಿ

ಮೊದಲೇ ಹೇಳಿದಂತೆ ಇವು ನಮ್ಮ ಜೀರ್ಣಕ್ರಿಯೆಗೆ ತುಂಬಾ ಸಹಕಾರಿ. ಇದರ ಸೇವನೆಯು ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ.

ಆರೋಗ್ಯಕರ ಕೂದಲಿಗೆ ಉಪಕಾರಿ

ಆರೋಗ್ಯದ ಜೊತೆಗೆ, ಈ ಚಿಯಾ ಬೀಜಗಳನ್ನು ನಮ್ಮ ತಲೆ ಮತ್ತು ದೇಹದ ಆರೋಗ್ಯಕ್ಕೂ ಬಳಸಬಹುದು. ಕೂದಲು ವೇಗವಾಗಿ ಬೆಳೆಯುತ್ತದೆ. ಕೂದಲು ನಯವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ. ಅಲ್ಲದೆ ಉದುರುವುದನ್ನು ತಡೆಯುತ್ತದೆ.

ತೂಕ ಇಳಿಕೆಗೆ ಸಹಕಾರಿ

ಅಧಿಕ ತೂಕ ಇರುವವರು ಈ ಚಿಯಾ ಬೀಜಗಳನ್ನು ಪ್ರತಿದಿನ ಸೇವಿಸಬಹುದು. ಹೀಗೆ ತಿನ್ನುವುದರಿಂದ ನಿಮ್ಮ ತೂಕ ಕಡಿಮೆಯಾಗುವುದಲ್ಲದೆ ಹೊಟ್ಟೆಯ ಕೊಬ್ಬನ್ನು ಕರಗಿಸುತ್ತದೆ. ಚಿಯಾ ಬೀಜಗಳನ್ನು ಪ್ರತಿದಿನ ಸೇವಿಸುವವರು 50 ಗ್ರಾಂಗಿಂತ ಹೆಚ್ಚು ಡೋಸೇಜ್ ಅನ್ನು ಸೇವಿಸಬಾರದು ಎಂದು ಅನೇಕ ವರದಿಗಳು ಸೂಚಿಸುತ್ತವೆ. ಅಂದರೆ, 5 ಟೇಬಲ್ ಸ್ಪೂನ್ಗಳಿಗಿಂತ ಹೆಚ್ಚು ಸೇವಿಸಬೇಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕ್ರಿಸ್‌ಮಸ್‌ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ ಅಪಘಾತ; ಇಬ್ಬರು ಯುವಕರ ದುರ್ಮರಣ..!ಕ್ರಿಸ್ಮಸ್ ದಿನವೇ ಮುದ್ದು ಮಗಳು ರಾಹಾಳ ಫೋಟೋ ಹಂಚಿಕೊಂಡ ಆಲಿಯಾ -ರಣಬೀರ್ ದಂಪತಿಮಾನವ ಕಳ್ಳಸಾಗಾಣಿಕೆಯಲ್ಲಿ ಬಂಧಿಯಾಗಿದ್ದ ಶಂಕೆ- ಮುಂಬೈ ತಲುಪಿದ ವಿಮಾನಗ್ಯಾಸ್ ಗೀಜರ್‌ನಿಂದ ಸ್ನಾನ ಮಾಡುವ ಮುನ್ನ ಇರಲಿ ಎಚ್ಚರ..! ಆರೋಗ್ಯ ಸಮಸ್ಯೆಗಳು ಉದ್ಭವವಾಗುತ್ತವೆ ಎನ್ನುತ್ತದೆ ಸಂಶೋಧನೆನಿರ್ಮಾಣ ಹಂತದ ಕಟ್ಟಡ ಕುಸಿತ - ಓರ್ವ ಕಾರ್ಮಿಕ ಸಾವು, ಹಲವರು ಗಂಭೀರ'ರಾಮಮಂದಿರದ ಇಡೀ ವಿಷಯ ಬಿಜೆಪಿಗೆ ಪ್ರದರ್ಶನವಾಗಿದೆ' - ಕಪಿಲ್‌ ಸಿಬಲ್‌'ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿಲ್ಲ'- ಶಿವಾನಂದ ಪಾಟೀಲ್ ಸ್ಪಷ್ಟನೆಕೊರೊನಾ ಜೆಎನ್.1 ವೈರಸ್ -ಸಭೆ ನಡೆಸಿ ನಿಯಮ ಪಾಲನೆಯ ನಿರ್ಧಾರ - ದಿನೇಶ್ ಗುಂಡೂರಾವ್ಶಬರಿಮಲೆಯ ಅಯ್ಯಪ್ಪ ಭಕ್ತರಿಗೆ ನೀರು,ಆಹಾರ ಸೌಲಭ್ಯ ಒದಗಿಸುವಂತೆ ಹೈಕೋರ್ಟ್‌ ನಿರ್ದೇಶನದತ್ತಮಾಲೆ ಧರಿಸುವುದಾಗಿ ಘೋಷಣೆ ಮಾಡಿದ್ದ ಹೆಚ್ ಡಿ ಕೆ ಮಾತು ತಪ್ಪಿದ್ರಾ ?