LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೀನಾ ಓಪನ್​ನಲ್ಲಿ ಮುಗಿದ ಭಾರತ ಪ್ರವಾಸ.. ಮೊದಲ ಸುತ್ತಿನಲ್ಲಿ ಸೋಲು ಕಂಡ ಸಾತ್ವಿಕ್ – ಚಿರಾಗ್ ಜೋಡಿ…!

ಚಾಂಗ್‌ಝೌ(ಚೀನಾ): ಬುಧವಾರ ಇಲ್ಲಿ ನಡೆದ ಚೀನಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಆರಂಭಿಕ ಸುತ್ತಿನಲ್ಲಿ ಸೋಲು ಅನುಭವಿಸಿದರು.

ವಿಶ್ವದ ಎರಡನೇ ಶ್ರೇಯಾಂಕಿತ ಭಾರತದ ಜೋಡಿ, 13ನೇ ಶ್ರೇಯಾಂಕದ ಇಂಡೋನೇಷ್ಯಾದ ಮುಹಮ್ಮದ್ ಶೋಹಿಬುಲ್ ಫಿಕ್ರಿ ಮತ್ತು ಮೌಲಾನಾ ಬಗಾಸ್ ಜೋಡಿಯ ವಿರುದ್ಧ ಒಂದು ಗಂಟೆ ಎಂಟು ನಿಮಿಷಗಳ ಆಟದಲ್ಲಿ 17-21, 21-11, 17-21 ರಿಂದ ಸೋತರು. ಈ ಜೋಡಿಯ ಸೋಲಿನ ನಂತರ ಚೀನಾ ಓಪನ್ ಭಾರತೀಯ ಸ್ಪರ್ಧೆ ಅಂತ್ಯವಾಯಿತು.

ಮೊದಲ ಸೆಟ್​ನಲ್ಲಿ 17-21ರಲ್ಲಿ ಕಳೆದುಕೊಂಡ ನಂತರ, ಭಾರತ ಜೋಡಿ ಎರಡನೇ ಸೆಟ್​ನಲ್ಲಿ ಪುಟಿದೇದ್ದು 21-11 ರಿಂದ ಗೇಮ್​ ವಶಪಡಿಸಿಕೊಂಡಿತು. ಇದರಿಂದ ಪಂದ್ಯದ ಗೆಲುವಿನ ನಿರ್ಣಯಕ್ಕೆ ಮೂರನೇ ಸೆಟ್​ ಆಡಿಸುವ ಅಗತ್ಯ ಎದುರಾಯಿತು. ನಿರ್ಣಾಯಕ ಪಂದ್ಯದಲ್ಲಿ, ಇಂಡೋನೇಷ್ಯಾ ಜೋಡಿ ಭಾರತೀಯರಿಗೆ ಗೆಲ್ಲಲು ಬಿಡಲಿಲ್ಲ. ಕೊನೆಯ ಹಂತದಲ್ಲಿ 21-17 ರಿಂದ ಪಂದ್ಯವನ್ನು ವಶಪಡಿಸಿಕೊಂಡರು.

ಇಂಡೋನೇಷಿಯಾದ ಜಜೋಡಿಯ ಎದುರು ಭಾರತದ ಸಾತ್ವಿಕ್-ಚಿರಾಗ್​ಗೆ ಈ ವರ್ಷದ ಮೂರನೇ ಸೋಲಾಗಿದೆ. ಈ ಮೊದಲು ಜೂನ್‌ನಲ್ಲಿ ಥೈಲ್ಯಾಂಡ್ ಓಪನ್‌ನ ಪ್ರಿ ಕ್ವಾರ್ಟರ್‌ಫೈನಲ್ ಮತ್ತು ಜನವರಿಯಲ್ಲಿ ಮಲೇಷ್ಯಾ ಓಪನ್‌ನಲ್ಲಿ ಸೋಲು ಕಂಡಿದ್ದರು. ಸ್ವಿಸ್ ಓಪನ್ ಸೂಪರ್ 300, ಕೊರಿಯಾ ಓಪನ್ ಮತ್ತು ಇಂಡೋನೇಷ್ಯಾ ಓಪನ್, ತಮ್ಮ ಚೊಚ್ಚಲ ಸೂಪರ್ 1000 ಪ್ರಶಸ್ತಿಯನ್ನು ಮೂರು ಪ್ರಶಸ್ತಿಗಳನ್ನು ಗೆದ್ದಿರುವ ಭಾರತೀಯ ಸಾತ್ವಿಕ್-ಚಿರಾಗ್ ಜೋಡಿ ಅತ್ಯತ್ತಮ ಪ್ರದರ್ಶನ ನೀಡಿ ಪಾರ್ಮ್​ನಲ್ಲಿದ್ದರು.

ಇದಕ್ಕೂ ಮೊದಲು ಮಿಶ್ರ ಡಬಲ್ಸ್ ಜೋಡಿ ಸಿಕ್ಕಿ ರೆಡ್ಡಿ ಮತ್ತು ರೋಹನ್ ಕಪೂರ್ ಅವರು ಮೊದಲ ಸುತ್ತಿನಲ್ಲಿ 15-21, 16-21 ರಿಂದ ಮಲೇಷ್ಯಾದ ಜೋಡಿಯಾದ ಚೆನ್ ತಾಂಗ್ ಜೀ ಮತ್ತು ತೋ ಈ ವೀ ವಿರುದ್ಧ ಸೋತು ಪಂದ್ಯಾವಳಿಯಿಂದ ಹೊರಬಿದ್ದರು. ಮಂಗಳವಾರ ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ಎಚ್‌ಎಸ್ ಪ್ರಣಯ್ ಅವರು ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರ ಕೈಯಲ್ಲಿ ಮೊದಲ ಸುತ್ತಿನಲ್ಲಿ 12-21, 21-13, 18-21 ಮೂರು ಗೇಮ್‌ಗಳಲ್ಲಿ ಸೋಲು ಅನುಭವಿಸಿದ್ದರು.

ಕಾಮನ್‌ವೆಲ್ತ್ ಕ್ರೀಡಾಕೂಟದ ಚಾಂಪಿಯನ್ ಲಕ್ಷ್ಯ ಸೇನ್ ಕೂಡ ಆರಂಭಿಕ ಸುತ್ತಿನಲ್ಲಿ ಇತ್ತೀಚಿನ ವಿಶ್ವ ಕಂಚಿನ ಪದಕ ವಿಜೇತ ಡೆನ್ಮಾರ್ಕ್‌ನ ಆಂಡರ್ಸ್ ಆಂಟೊನ್ಸೆನ್ ವಿರುದ್ಧ 21-23, 21-16, ಮತ್ತು 9-2 ಸೆಟ್‌ಗಳಿಂದ ಪರಾಭವಗೊಂಡು ಸ್ಪರ್ಧೆಯಿಂದ ಹೊರಬಿದ್ದರು. ಬರುವ ಏಷ್ಯನ್ ಕ್ರೀಡಾಕೂಟದ ಮೇಲೆ ಕಣ್ಣಿಟ್ಟಿರುವ ಏಸ್ ಷಟ್ಲರ್‌ಗಳಾದ ಪಿವಿ ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ ಟೂರ್ನಿಯಿಂದ ಹಿಂದೆ ಸರಿದಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನುಉಡುಪಿ: ಟ್ರಾನ್ಸ್‌ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮ್ಯಾನ್ ಸಾವುಕೇರಳದ ನಾಪತ್ತೆಯಾಗಿದ್ದ 21 ಮಂದಿ ಐಎಸ್‌ಗೆ ಸೇರ್ಪಡೆ..!ಉಗ್ರರ ಗುಂಡಿಗೆ ನಿವೃತ್ತ ಪೊಲೀಸ್ ಅಧಿಕಾರಿ ಬಲಿಉಪನ್ಯಾಸ ನೀಡುತ್ತಿರುವ ವೇಳೆ ಹೃದಯಾಘಾತ- ಕುಸಿದು ಬಿದ್ದು ಪ್ರಾಧ್ಯಾಪಕ ಸಾವು