LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲಲು ನಮ್ಮ ರಣತಂತ್ರ ಏನಿರಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ರಾಜ್ಯ ಮತ್ತು ದೇಶದ ಜನರು ನರೇಂದ್ರ ಮೋದಿಯವರು ಮತ್ತೆ ಪ್ರಧಾನಮಂತ್ರಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಜನರು ನಮ್ಮನ್ನು ಬಯಸುತ್ತಿದ್ದಾರೆ. ನಾವು ವಿಶೇಷ ಪ್ರಯತ್ನ ಮಾಡಿದರೆ, ಒಂದಾಗಿ ಹೋದರೆ 28ಕ್ಕೆ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸ ನಮಗಿದೆ ಎಂದರು.

ರಾಜ್ಯಾಧ್ಯಕ್ಷ ವಿಜಯೇಂದ್ರರವರ ನೇತೃತ್ವದಲ್ಲಿ ಪ್ರಮುಖರ ವಿಶೇಷ ಸಮಾಲೋಚನಾ ಸಭೆ ನಡೆಸಲಾಗಿದೆ. ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 28 ಸ್ಥಾನಗಳನ್ನೂ ಗೆಲ್ಲುವ ಕುರಿತು ಯಾವ ರೀತಿ ಕಾರ್ಯಯೋಜನೆ ರೂಪಿಸಬೇಕು. ಜೆಡಿಎಸ್ ಜೊತೆ ಸಮನ್ವಯ ಸಾಧಿಸಿ ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಎಂಬ ವಿಷಯ ಚರ್ಚಿಸಲಾಗಿದೆ.

ರಣತಂತ್ರದ ಮಾರ್ಗಸೂಚಿಯ ಚರ್ಚೆ ನಡೆದಿದೆ ಎಂದು ವಿವರಿಸಿದರು.2 ಪದವೀಧರ, 4 ಶಿಕ್ಷಕರ ಕ್ಷೇತ್ರ ಸೇರಿ ವಿಧಾನಪರಿಷತ್ತಿನ 6 ಕ್ಷೇತ್ರಗಳ ಚುನಾವಣೆಯೂ ಬರುತ್ತಿದೆ. ಈ ಚುನಾವಣಾ ದೃಷ್ಟಿಯಿಂದಲೂ ಚರ್ಚೆ ನಡೆದಿದೆ. ಬಿಜೆಪಿಯನ್ನು ಮತ್ತೆ ಸಂಘಟಿಸುವುದೇ ನಮ್ಮ ಗುರಿ ಎಂದು ವಿವರಿಸಿದರು.
ವಿಧಾನಸಭಾ ಚುನಾವಣೆಯ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ ನಮ್ಮದು. ಅದಕ್ಕಾಗಿ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಪೈಲಟ್‌ ಗಳ ಸಾಮೂಹಿಕ ರಜೆ; 78 ವಿಮಾನಗಳು ರದ್ದುಡಬಲ್ ಮರ್ಡರ್ : ಗಂಡ, ಮಕ್ಕಳನ್ನು ಬಿಟ್ಟು ತನ್ನ ಜೊತೆಗಿದ್ದ ಪ್ರಿಯತಮೆಯನ್ನೇ ಕೊಂದ ಪ್ರಿಯಕರಕೋವಿಶೀಲ್ಡ್ ಲಸಿಕೆಗಳನ್ನು ಹಿಂಪಡೆಯಲು ಅಸ್ಟ್ರಾಜೆನೆಕಾ ನಿರ್ಧಾರಪಾದದ ಸಮಸ್ಯೆಗಳಿಗೆ ಇಲ್ಲಿವೆ ಸುಲಭ ಉಪಾಯಉತ್ತರಾಣಿ ಗಿಡದ ಬೇರಿನಿಂದ ನೀವು ಕುಬೇರರಾಗಬಹುದು ಸಕಲ ಸಮಸ್ಯೆಗಳಿಗೂ ಈ ವನಸ್ಪತಿಯಿಂದ ಪರಿಹಾರ ಶತಸಿದ್ಧ!ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮಹತ್ವ ಸುದ್ದಿ.!ನಿನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯಾವ ರಾಜ್ಯದಲ್ಲಿ ಎಷ್ಟು ಪ್ರಮಾಣ ಮತದಾನವಾಗಿದೆ.?ಎರಡನೇ ಹಂತದ ಚುನಾವಣೆಯಲ್ಲಿ ಯಾವ ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ.?ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ.!ಕೈಮಗ್ಗ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ