LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಮೀನಿನಲ್ಲಿ ಸಿಕ್ಕಿತು ವಜ್ರ - ರೈತ ರಾತ್ರೋರಾತ್ರಿ ಲಕ್ಷಾಧಿಪತಿ

ಕರ್ನೂಲು:ಕರ್ನೂಲು ಜಿಲ್ಲೆಯ ತುಗ್ಗಲಿ ಮಂಡಲದ ಜೊನ್ನಗಿರಿಯ ರೈತ ಬೋಯ ರಾಮಾಂಜನೇಯುಲು ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ವಜ್ರ ಸಿಕ್ಕಿದೆ. ಇದರಿಂದ ರೈತ ರಾತ್ರೋರಾತ್ರಿ ಶ್ರೀಮಂತನಾಗಿದ್ದಾನೆ.

ಜೊನ್ನಗಿರಿಯ ರಾಮಾಂಜನೇಯುಲು ಮತ್ತು ಅವರ ಸಹೋದರ ಶೇಖರ್‌, ತಮ್ಮ ಎರಡು ಎಕರೆ ಜಮೀನಿನಲ್ಲಿ ಬೆಳೆ ಬೆಳೆದು ಜೀವನ ಸಾಗಿಸುತ್ತಿರುವವರು. ಸಾಗುವಳಿ ಇಲ್ಲದಿದ್ದಾಗ ವಾಹನ ಚಾಲಕರಾಗಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಬೋಯ ರಾಮಾಂಜನೇಯಲು ಎಂಬುವರು ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಕ್ಕಿದ ವಜ್ರವನ್ನು ಜೊನ್ನಗಿರಿಯ ವಜ್ರದ ವ್ಯಾಪಾರಿಗೆ ತೋರಿಸಿದ್ದು, ವ್ಯಾಪಾರಿ 12 ಲಕ್ಷ ರೂ.ನಗದು ಹಾಗೂ ಐದು ತೊಲ ಚಿನ್ನ ನೀಡಿದ್ದಾನೆ ಎನ್ನಲಾಗಿದೆ.

ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ರೈತನಿಗೆ ದಿಢೀರ್ ನಗ-ನಗದು ಹಾಗೂ ಬಂಗಾರದ ಹರಿವು ಅಪಾರ ಸಂತಸ ತಂದಿದೆ. ಆದರೆ, ಈ ಘಟನೆಯ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಖಾರಿಫ್ ಹಂಗಾಮಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಈ ವರ್ಷ ಇಲ್ಲಿಯವರೆಗೆ 42 ವಜ್ರಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಪ್ರತಿ ವಾರ 4–8 ವಜ್ರಗಳು ಪತ್ತೆಯಾಗುತ್ತಿವೆ ಎಂದು ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ. ಆದರೆ ಅವು ಎಲ್ಲಿ ಪತ್ತೆಯಾಗಿವೆ ಮತ್ತು ಯಾರಿಗೆ ಮಾರಾಟವಾಗಿವೆ ಎಂಬುದು ನಿಗೂಢವಾಗಿಯೇ ಉಳಿದಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!